ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಕಡಲತೀರದಲ್ಲಿ ಶುಕ್ರವಾರ ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನಿವಾಸಿಗಳಾಗಿರುವ ಅರ್ಜುನ್, ಉಮೇಶ್, ಸೂರ್ಯ ಎಂಬ ಮೂವರನ್ನು ರಕ್ಷಣೆ ಮಾಡಲಾಗಿದೆ. ಶಿಕಾರಿಪುರದಿಂದ ಪ್ರವಾಸಕ್ಕಾಗಿ ಮೂವರು ಕೂಡ ಮುರ್ಡೇಶ್ವರಕ್ಕೆ ಬಂದಿದ್ದಾರೆ. ಈ ವೇಳೆಯಲ್ಲಿ ಕಡಲಬ್ಬರ ಜೋರಾಗಿದ್ದು, ಆದರೂ ಸಮುದ್ರಕ್ಕೆ ಇಳಿದಿದ್ದಾರೆ. ಅಲೆಯ ರಭಸಕ್ಕೆ ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ಕೂಡಲೇ ಬೋಟ್ನೊಂದಿಗೆ ಸಮುದ್ರಕ್ಕೆ ಇಳಿದು ಮೂವರನ್ನು ರಕ್ಷಣೆ ಮಾಡಿದ್ದಾರೆ.
ಮುರ್ಡೇಶ್ವರ ಬೀಚ್ ಸೂಪರ್ವೈಸರ್ ದತ್ತಾತ್ರೇಯ ಶೆಟ್ಟಿ, ಟೂರಿಸ್ಟ್ ಮಿತ್ರದ ಸುಧಾಕರ್, ಲೈಫ್ ಗಾರ್ಡ್ ಸಿಬ್ಬಂದಿ ಕೇಶವ, ಹನುಮಂತ, ವಿಘ್ನೇಶ್ವರ, ರಾಮಚಂದ್ರ, ಜಯರಾಮ ಎಂಬವರೇ ಪ್ರವಾಸಿಗರನ್ನು ರಕ್ಷಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ