ಆಯುಧ ಪೂಜೆ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆಗೆ ಆಹ್ವಾನವಿಲ್ಲವೆಂದು ಮಾರಾಮಾರಿ; ಹಲವರಿಗೆ ಗಾಯ..!

ಯಾದಗಿರಿ: ನಗರಸಭೆ ಸದಸ್ಯೆಯೊಬ್ಬರನ್ನು ಆಯುಧ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂಬ ಕಾರಣಕ್ಕೆ ಮಾರಾಮಾರಿ ನಡೆದು ಒಂಭತ್ತು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಗುರುವಾರ ರಾತ್ರಿ ಯಾದಗಿರಿ ನಗರದ ಲಾಡಿಜ್ಗಲ್ಲಿ ಬಡಾವಣೆಯ ಭವಾನಿ ಮಂದಿರ ಬಳಿ ಈ ಘಟನೆ ನಡೆದಿದೆ.
ಆಯುಧ ಪೂಜೆ ಹಿನ್ನೆಲೆಯಲ್ಲಿ ಹಿಂದೂ ಸೇವಾ ಸಮಿತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ ಜಯಮ್ಮಗೆ ಅವರಿಗೆ ಆಹ್ವಾನ ನೀಡದ ಕಾರಣ ಅವರ ಬೆಂಬಲಿಗರು ಮತ್ತು ಕಾರ್ಯಕ್ರಮ ಆಯೋಜಕರ ಮಧ್ಯೆ ಗಲಾಟೆ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಈ ವೇಳೆ ಕುರ್ಚಿ, ಟೇಬಲ್, ಬಡಿಗೆಗಳಿಂದ ಹೊಡೆದಾಟ ನಡೆದಿದೆ. ಗಲಾಟೆಯಲ್ಲಿ ನಗರಸಭೆ ಸದಸ್ಯೆ ಪತಿ ಸೇರಿದಂತೆ ಒಂಬತ್ತು ಮಂದಿಗೆ ಗಾಯಗಳಾಗಿದ್ದು ಈ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

0 / 5. 0

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement