ಅಫ್ಘಾನಿಸ್ತಾನ ಶಾಂತಿ ಕುರಿತು ಚರ್ಚೆ : ಎನ್‌ಎಸ್‌ಎ ಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ಭಾರತದ ಆಹ್ವಾನ

ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀಪಡಿಸಿಕೊಂಡ ನಂತರ ಅಫ್ಘಾನಿಸ್ತಾನದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಫ್ಘಾನಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಮತ್ತು ಪ್ರಾದೇಶಿಕ ಶಕ್ತಿಗಳ ಜತೆ ಚರ್ಚೆ ನಡೆಸಲು ಭಾರತ ಮುಂದಾಗಿದೆ. ಅಫ್ಘಾನಿಸ್ತಾನ ಭವಿಷ್ಯ ಎಂಬ ವಿಚಾರ ಕುರಿತು ನವೆಂಬರ್ ನಲ್ಲಿ ನವದೆಹಲಿಯಲ್ಲಿ ಪ್ರಾದೇಶಿಕ ಭದ್ರತಾ ಸಂವಾದ ನಡೆಸಲು ತೀರ್ಮಾನಿಸಲಾಗಿದ್ದು, ಈ ಮಹತ್ವಪೂರ್ಣ ಸಭೆಗೆ ರಷ್ಯಾ, ಚೀನಾ, ಇರಾನ್, ಪಾಕಿಸ್ತಾನ, … Continued

ಬಾಂಗ್ಲಾದೇಶ: ಮತ್ತೊಂದು ಹಿಂದೂ ದೇವಾಲಯ ಧ್ವಂಸ, ಅಂಗಡಿಗಳ ಲೂಟಿ

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದು ಸಮುದಾಯದ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಧರ್ಮನಿಂದನೆ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ ನಂತರ ಭುಗಿಲೆದ್ದಿರುವ ಕೋಮು ಹಿಂಸಾಚಾರ ಮುಂದುವರಿದಿದ್ದು ಮತ್ತೊಂದು ಹಿಂದು ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ. ಈ ಮಧ್ಯೆ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ದೇಶದಾದ್ಯಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹಿಂದು ಸಂಘಟನೆಯ ಮುಖಂಡರು ಪ್ರಕಟಿಸಿದ್ದಾರೆ. ಶನಿವಾರ ನಡೆದ … Continued

ಕೊರೊನಾ ಸಾಂಕ್ರಾಮಿಕ ರೋಗದ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಒಂದೂ ಕೋವಿಡ್ ಸಾವು ದಾಖಲಿಸದ ಮುಂಬೈ..!

ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕದ ಆರಂಭವಾದ ನಂತರ ಇದೇ ಮದಲ ಬಾರಿಗೆ ಮುಂಬೈ ಭಾನುವಾರ ಒಂದೇ ಒಂದು ಕೋವಿಡ್ -19 ಸಾವನ್ನು ದಾಖಲಿಸಲಿಲ್ಲ. ಟ್ವೀಟ್‌ನಲ್ಲಿ, ಮುಂಬೈ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಅವರು ಮಾರ್ಚ್ 26, 2020 ರ ನಂತರ ಇದೇ ಮೊದಲ ಬಾರಿಗೆ ಮುಂಬೈ ಭಾನುವಾರ ಕೊರೊನಾ ವೈರಸ್ಸಿನಿಂದ ಶೂನ್ಯ ಸಾವುಗಳನ್ನು ವರದಿ … Continued

ಭಾರತದ ತಂಡದ ಮಾಜಿ ಕ್ರಿಕೆಟ್‌ ಆಟಗಾರ ಯುವರಾಜ್ ಸಿಂಗ್ ಬಂಧನ; ವಿಚಾರಣೆ ಬಳಿಕ ಬಿಡುಗಡೆ

ಚಂಡೀಗಡ: ಪರಿಶಿಷ್ಟ ಜಾತಿ ಸಮುದಾಯವನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್‌ ತಂಡದ ಮಾಜಿ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹರಿಯಾಣದ ಪೊಲೀಸರು ಇಲ್ಲಿ ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ. ಕಳೆದ ವರ್ಷ ರೋಹಿತ್ ಶರ್ಮಾ ಜೊತೆ ಲೈವ್ ಚ್ಯಾಟಿಂಗ್ ಮಾಡುವ ವೇಳೆ ಪರಿಶಿಷ್ಟ ಜಾತಿಯ ಯುಜವೇಂದ್ರ ಚಹಲ್ ಅವರನ್ನ ಜಾತಿ ಕಾರಣಕ್ಕೆ … Continued

ಗೋಕರ್ಣ: ಈಜಲು ಸಮುದ್ರಕ್ಕೆ ಇಳಿದ ಬೆಂಗಳೂರಿನ ಯುವಕ ನಾಪತ್ತೆ

ಕುಮಟಾ: ಸಮುದ್ರದಲ್ಲಿ ಈಜಲು ಹೋಗಿದ್ದ ಪ್ರವಾಸಿಗನೊಬ್ಬ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಬೆಂಗಳೂರು ಮೂಲದ ರವಿ ನಂದನ್ (23) ಎಂದು ಗುರುತಿಸಲಾಗಿದೆ. ಆತನ ಪತ್ತೆಗಾಗಿ ಹುಡುಕಾಟ ನಡೆದಿದೆ. ಭಾನುವಾರ ಬೆಂಗಳೂರಿನಿಂದ ಐದು ಜನ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ … Continued

ಜ್ವರ, ಶೀತಕ್ಕೆ ಚಿಕಿತ್ಸೆ ನೀಡಲು 7 ತಿಂಗಳ ಮಗುವಿಗೆ ಕಬ್ಬಿಣದ ಸರಳಿಂದ ಬರೆ ಎಳೆದ ಮಾಂತ್ರಿಕ..!

ಜೈಪುರ: ಈವಿಜ್ಞಾನ ಹಾಗೂ ತಂತ್ರಜ್ಞಾನದ ಕಾಲದಲ್ಲಿಯೂ ಮೂಢ ನಂಬಿಕೆ ಅನುಸರಿಸುವವರೂ ಇದ್ದಾರೆ. ಇದಕ್ಕೆ ಉದಾಹರಣೆಯಾಗಿ ರಾಜಸ್ಥಾನದ ಭಿಲ್ವಾರಾದಲ್ಲಿ ಘಟನೆಯೊಂದು ನಡೆದಿದ್ದು, ತಾಂತ್ರಿಕನೊಬ್ಬ 7 ತಿಂಗಳ ಗಂಡು ಮಗುವಿಗೆ ಜ್ವರ ಮತ್ತು ಶೀತಕ್ಕೆ ಚಿಕಿತ್ಸೆ ನೀಡುವುದಾಗಿ ಹೇ ಬಿಸಿ ಕಬ್ಬಿಣ ರಾಡ್‌ನಿಂದ ಬರೆ ಎಳೆದಿದ್ದಾನೆ. ಭಿಲ್ವಾರಾದ ದಾದಾಬರಿ ಕಾಲೋನಿಯಲ್ಲಿ ಮಧ್ಯಪ್ರದೇಶದ ನೆಮಂಚ್ ಮೂಲದ ಕೂಲಿ ಕಾರ್ಮಿಕ ಶಂಭು … Continued

ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸೋಂಕು ಏರಿಕೆ, ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 326 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 4 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 380 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 9,450 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,83,459 ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 29,36,039 … Continued

ಕಾಶ್ಮೀರದ ಕುಲ್ಗಾಂನಲ್ಲಿ ಮತ್ತೆ ಇಬ್ಬರು ಸ್ಥಳೀಯೇತರ ಕಾರ್ಮಿಕರ ಗುಂಡಿಕ್ಕಿ ಹತ್ಯೆ ಮಾಡಿದ ಭಯೋತ್ಪಾಕರು, ಎರಡು ದಿನಗಳಲ್ಲಿ ಮೂರನೇ ದಾಳಿ

ಕುಲಗಂ: : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಭಯೋತ್ಪಾದಕರು ಇಬ್ಬರು ಸ್ಥಳೀಯೇತರ ಕಾರ್ಮಿಕರನ್ನು ಗುಂಡು ಹೊಡೆದು ಕೊಂದಿದ್ದು, ಮತ್ತೊಬ್ಬನನ್ನು ಗಾಯಗೊಳಿಸಿದ್ದಾರೆ. ಕಾಶ್ಮೀರದಲ್ಲಿ ಕಳೆದ 15 ದಿನಗಳಲ್ಲಿ 11 ನಾಗರಿಕರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಕುಲ್ಗಾಂನ ಲಾರಾನ್ ಗಂಗಿಪೋರ ವನ್ಪೋಹ್ ನಲ್ಲಿ ಕಾರ್ಮಿಕರ ಬಾಡಿಗೆ ವಸತಿಗೃಹ ಪ್ರವೇಶಿಸದ ಬಂದೂಕುಧಾರಿಗಳು ಪ್ರವೇಶಿಸಿದರು ಮತ್ತು ಅವರ ಮೇಲೆ ಗುಂಡು … Continued

ಕೊರೊನಾ ಬೆನ್ನಲೇ ಚೀನಾದಲ್ಲಿ ಮತ್ತೊಂದು ಸಾಂಕ್ರಾಮಿಕ ರೋಗ ಪತ್ತೆ

ಬೀಜಿಂಗ್: ಈ ಚಳಿಗಾಲದಲ್ಲಿ “ಟ್ವಿಂಡೆಮಿಕ್” (Twindemic’) ನ ಸಂಭವನೀಯ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿರುವ ಚೀನಾದ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಸೆಪ್ಟೆಂಬರ್ ನಿಂದ ದೇಶದ ದಕ್ಷಿಣ ಪ್ರಾಂತ್ಯಗಳಲ್ಲಿ ಜ್ವರ ಹೆಚ್ಚಾಗಿರುವುದರಿಂದ ಈ ಎಚ್ಚರಿಕೆ ನೀಡಲಾಗಿದೆ. ಶುಕ್ರವಾರ ಹೊರಡಿಸಿದ ಅಧಿಸೂಚನೆಯಲ್ಲಿ, ಚೀನಾದ ಆರೋಗ್ಯ ಆಯೋಗವು ಜ್ವರದ ಋತುವಿನಲ್ಲಿ ಜ್ವರದ ( influenza) ತಡೆಗಟ್ಟುವಿಕೆ ಮತ್ತು ನಿಯಂತ್ರಣ … Continued

ಹಳದೀಪುರ: ಬೈಕ್‌-ಸಾರಿಗೆ ಬಸ್‌ ಡಿಕ್ಕಿ, ಬೈಕ್‌ ಸವಾರ ಸಾವು

ಹೊನ್ನಾವರ : ತಾಲೂಕಿನ ಹಳದೀಪುರದ ನವಿಲಗೋಣ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾರಿಗೆ ಬಸ್ -ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಸಾವಿಗೀಡಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದ ವರದಿಯಾಗಿದೆ. ಸಾರಿಗೆ ಇಲಾಖೆಯ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದು ಬೈಕ್‌ ನುಜ್ಜುಗುಜ್ಜಾಗಿದೆ. ಮೃತ ಬೈಕ್ ಸವಾರನನ್ನು ಸಂಕೊಳ್ಳಿಯ ಗಣಪತಿ ಅನಂತ … Continued