ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸೋಂಕು ಏರಿಕೆ, ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 326 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 4 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 380 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ 9,450 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,83,459 ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 29,36,039 ಕ್ಕೆ ಹೆಚ್ಚಳವಾಗಿದೆ ಸೋಂಕಿನಿಂದ ಒಟ್ಟಾರೆ ಮೃತಪಟ್ಟವರ ಸಂಖ್ಯೆ 37,941 ಕ್ಕೆ ಹೆಚ್ಚಳವಾಗಿದೆ.
ಬಾಗಲಕೋಟೆ, ಬೀದರ್, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯಾವುದೇ ಸೋಂಕು ದೃಢಪಟ್ಟಿಲ್ಲ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.42 ಕ್ಕೆ ಇಳಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ. 1.22 ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕು ಏರಿಕೆಯಾಗಿದೆ .ಇಂದು 173 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಒಬ್ಬರು ಮೃತಪಟ್ಡಿದ್ದಾರೆ. 87 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ…
ಬಾಗಲಕೋಟೆ – 0, ಬಳ್ಳಾರಿ – 1, ಬೆಳಗಾವಿ -4, ಬೆಂಗಳೂರು ಗ್ರಾಮಾಂತರ- 5, ಬೆಂಗಳೂರು ನಗರ. – 173, ಬೀದರ್ -0, ಚಾಮರಾಜನಗರ – 1, ಚಿಕ್ಕಬಳ್ಳಾಪುರ – 1, ಚಿಕ್ಕಮಗಳೂರು- 3, ಚಿತ್ರದುರ್ಗ – 1, ದಕ್ಷಿಣ ಕನ್ನಡ -22, ದಾವಣಗೆರೆ -0, ಧಾರವಾಡ -4, ಗದಗ – 0, ಹಾಸನ – 12, ಹಾವೇರಿ – 0, ಕಲಬುರಗಿ- 1, ಕೊಡಗು – 8, ಕೋಲಾರ -5, ಕೊಪ್ಪಳ -0, ಮಂಡ್ಯ – 4, ಮೈಸೂರು -42, ರಾಯಚೂರು- 1, ರಾಮನಗರ -0, ಶಿವಮೊಗ್ಗ – 5, ತುಮಕೂರು -17, ಉಡುಪಿ –12, ಉತ್ತರ ಕನ್ನಡ – 4, ವಿಜಯಪುರ – 0 ಹಾಗೂ ಯಾದಗಿರಿ- 0

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement