ದುಬೈ:ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಅನಿವಾಸಿ ಭಾರತೀಯರಿಗೆ‌ ಕೈಗಾರಿಕಾ ‌ಸಚಿವ ‌ನಿರಾಣಿ‌ ಆಹ್ವಾನ

ದುಬೈ: ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ರಾಜ್ಯದ ಬೃಹತ್ ‌ಮತ್ತು ಮಧ್ಯಮ ಕೈಗಾರಿಕಾ ‌ ಸಚಿವ ‌ಮುರುಗೇಶ್ ನಿರಾಣಿ‌ ಆಹ್ವಾನಿಸಿದ್ದು, ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದರೆ, ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಹೇಳಿದ್ದಾರೆ.
ದುಬೈನಲ್ಲಿ ಬಸವ‌ ಸಮಿತಿ ‌ವತಿಯಿಂದ‌ ಏರ್ಪಡಿಸಿದ್ದ ಬಸವ‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಇಂದು ದೇಶದಲ್ಲೇ ‌ಅತ್ತುತ್ತಮ‌ ಕೈಗಾರಿಕಾ ತಾಣವಾಗಿ ಹೊರಹೊಮ್ಮಿದೆ. ನಮ್ಮಲ್ಲಿರುವ‌ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳಿಂದ ರಾಜ್ಯಕ್ಕೆ ‌ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬರುತ್ತಿದ್ದಾರೆ ಎಂದರು.
ಅನಿವಾಸಿ ಭಾರತೀಯರು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದರೆ, ಅಗತ್ಯವಿರುವ ಭೂಮಿ, ನೀರು ,‌ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ‌ಸೌಕರ್ಯಗಳನ್ನು ಕಾಲಮಿತಿಯೊಳಗೆ ಒದಗಿಸಿ ಕೊಡುವ ಆಶ್ವಾಸನೆ‌ ನೀಡಿದರು.
ನಾವು ಜಾರಿಗೆ ತಂದಿರುವ ನೂತನ ಕೈಗಾರಿಕಾ ‌ನೀತಿಯಿಂದ ಉದ್ಯಮಿಗಳು ಸ್ವಯಂಪ್ರೇರಿತರಾಗಿ ಉದ್ಯಮ‌ ಆರಂಭಿಸಲು ಮುಂದೆ ಬರುತ್ತಿದ್ದಾರೆ.
ಬಂಡವಾಳ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ‘ ಕೆಂಪು ರತ್ನಗಂಬಳಿ’ ಹಾಸಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಇಡೀ ‌ದೇಶದಲ್ಲೇ‌ ಅತಿ ಹೆಚ್ಚು ವಿದೇಶಿ ನೇರ ಹೂಡಿಕೆ ( ಎಫ್‌ಡಿಐ)ಯಾಗಿರುವುದು ಕರ್ನಾಟಕದಲ್ಲಿ. ಈ ಬೆಳವಣಿಗೆ ನಮ್ಮ ರಾಜ್ಯ ಕೈಗಾರಿಕೆಯಲ್ಲಿ ‌ಸಾಕಷ್ಟು‌ ಸುಧಾರಣೆಯಾಗುತ್ತದೆ ಎಂಬುದರ ಮುನ್ಸೂಚನೆ ಎಂದ ಅವರು ಇನ್ನು ಕೆಲವೇ ವರ್ಷಗಳಲ್ಲಿ ಕರ್ನಾಟಕ ಕೈಗಾರಿಕಾ ಕ್ಷೇತ್ರದಲ್ಲಿ ‘ದೊಡ್ಡ ಕ್ರಾಂತಿಯನ್ನೇ ಮಾಡಲಿದೆ ಎಂದು ‌ಅಭಿಪ್ರಾಯಪಟ್ಟರು.

ಪ್ರಮುಖ ಸುದ್ದಿ :-   ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಬೇರೆ ಯಾರಿಗೂ ಕೊಟ್ಟಿಲ್ಲ : ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ ಹೇಳಿಕೆ

ಬಸವಣ್ಣ ಎಂದಿಂದಿಗೂ ಅಜರಾಮರ..
ಕಾಯಕಯೋಗಿ ಬಸವಣ್ಣನವರ ಸಂದೇಶಗಳು‌ ಇಂದಿನ ಯುವ ಜನಾಂಗಕ್ಕೆ ‌ಅತ್ಯಂತ‌ ಅಗತ್ಯವಾಗಿದೆ ಎಂದು ನಿರಾಣಿ ಪ್ರತಿಪಾದಿಸಿದರು.
12ನೇ ಶತಮಾನದಲ್ಲೇ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದರು. ನಾವೆಲ್ಲರೂ ‌ಒಂದೇ ಎಂಬ ಸಂದೇಶವನ್ನು ಸಾರಿದ‌ ಅವರ ಸಂದೇಶಗಳು ಎಂದೆಂದಿಗೂ ಅಜರಾಮರ. ಕಾಯಕವೇ ಕೈಲಾಸ ‘ ಎಂಬ ಸಂದೇಶದ ಮೂಲಕ ‌ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧಿಸಲು‌ ಸಾಧ್ಯ ಎಂದು ಸಾರಿದ್ದರು. ಇಂದಿನ ಯುವ‌ಜನಾಂಗ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದರೆ ಖಂಡಿತ ‘ ಯಶಸ್ಸು’ ಸಿಗುತ್ತವೆ ಎಂದು ನಿರಾಣಿ ಅವರು ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಬಸವ ಸಮಿತಿಯ ಪದಾಧಿಕಾರಿಗಳಾದ ಚಂದ್ರಶೇಖರ್ ಲಿಂಗದಹಳ್ಳಿ, ನಿವೃತ್ತ ಪೊಲೀಸ್ ಮಹಾನಿದೇರ್ಶಕ ಶಂಕರ್ ಬಿದರಿ
ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement