ಬಸ್-ಮ್ಯಾಕ್ಸಿ ಕ್ಯಾಬ್‌ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರ ಸ್ಥಿತಿ ಗಂಭೀರ

ತುಮಕೂರು: ತುಮಕೂರು-ಶಿವಮೊಗ್ಗ ಹೆದ್ದಾರಿಯಲ್ಲಿ ಬಸ್-ಮ್ಯಾಕ್ಸಿ ಕ್ಯಾಬ್‌ ಮಧ್ಯೆ ಮಧ್ಯೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಗೊಲ್ಲಹಳ್ಳಿಯ ಬಳಿ ಇಂದು ಬೆಳಗಿನ ಜಾವ 5.30ರ ಸಮಯದಲ್ಲಿ ಸಂಭವಿಸಿದೆ.
ಮೃತರನ್ನು ಕವಿತಾ(38), ದರ್ಶನ್(22), ದಿವಾಕರ್(25), ಕೃಷ್ಣಮೂರ್ತಿ(25)ಎಂದು ಗುರುತಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮೃತರು ಮ್ಯಾಕ್ಸಿ ಕ್ಯಾಬ್​ನಲ್ಲಿ ತುಮಕೂರಿನ ಮಾರುಕಟ್ಟೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಅಪಘಾತ ನಡೆದಿದೆ., ಖಾಸಗಿ ಬಸ್ಸಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮ್ಯಾಕ್ಸಿ ಕ್ಯಾಬ್​ನಲ್ಲಿ ತರಕಾರಿ ಹಾಗೂ ಹೂಗಳನ್ನು ತುಂಬಿಕೊಂಡು ಹೋಗುತಿದ್ದರು. ಈ ವೇಳೆ ಖಾಸಗಿ ಬಸ್ ಶಿವಮೊಗ್ಗದಿಂದ ಬೆಂಗಳೂರಿನತ್ತ ಬರುತ್ತಿತ್ತು. ಈ ವೇಳೆ ಎರಡು ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಮೃತರು ತುಮಕೂರಿನ ಮಾರುಕಟ್ಟೆಗೆ ಹೂ ತರುತ್ತಿದ್ದ ರೈತರು ಎನ್ನಲಾಗಿದೆ. ರೈತರು ಪ್ರತಿದಿನ ಹೂವಿನ ವ್ಯಾಪಾರಕ್ಕೆ ತುಮಕೂರಿಗೆ ಬರುತ್ತಿದ್ದರು. ಹೂ ಕೊಂಡು ತುರುವೇಕೆರೆ, ಚಿಕ್ಕನಾಯಕನಹಳ್ಳಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ದಿನ ಬಸ್​ನಲ್ಲಿ ತುಮಕೂರಿಗೆ ಬರುತ್ತಿದ್ದರು. ಕ್ಯಾಬ್ ಮೃತ ಮಹಿಳೆ ಕವಿತಾಗೆ ಸೇರಿದ್ದಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ರಾಹುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement