12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ಒದ್ದ ಶಿಕ್ಷಕನ ಬಂಧನ

ಚೆನ್ನೈ: 12ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಹಾಗೂ ಒದ್ದ ಇಲ್ಲಿನ ಕಡಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ ಸರ್ಕಾರಿ ಆದಿ ದ್ರಾವಿಡರ್​ ಮಾಧ್ಯಮಿಕ ಶಾಲೆಯ ಭೌತಶಾಸ್ತ್ರ ಪ್ರಾಧ್ಯಾಪಕರಾದ ಅವರು 12ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಬೆತ್ತದಿಂದ ಮನಸಿಗೆ ಬಂದಂತೆ ಥಳಿಸಿ ತೊಡೆಯ ಮೇಲೆ ಒದ್ದಿದ್ದಾರೆ. ಅದೇ ಸಮಯಕ್ಕೆ ಕ್ಲಾಸ್​​ನಲ್ಲಿದ್ದ ಇನ್ನೊಬ್ಬ ವಿದ್ಯಾರ್ಥಿ ಅದನ್ನು ವಿಡಿಯೋ ಮಾಡಿ ಸೋಷಿಯಲ್​ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ.
ಸದ್ಯ ಶಿಕ್ಷಕನ ವಿರುದ್ಧ ಪೊಲೀಸರು ಎಸ್​ಸಿ/ಎಸ್​ಟಿ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿ ಭೌತಶಾಸ್ತ್ರ ರೆಕಾರ್ಡ್​ ನೋಟ್​ಬುಕ್​ ಸಂಗ್ರಹಿಸಲು ಅನುಮತಿ ಪಡೆದಿದ್ದ ಆದರೆ ತರಗತಿಗೆ ಬಂಕ್​ ಮಾಡಿದ್ದ. ಹೀಗಾಗಿ ಕೋಪಗೊಂಡು ಹೊಡೆದಿದ್ದಾಗಿ ಆ ಶಿಕ್ಷಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಈತ ತಾನು ತರಗತಿಗೆ ಬಂಕ್​ ಮಾಡುವುದಲ್ಲದೆ, ಕಾಲೇಜಿನ ಮೂರನೇ ಫ್ಲೋರ್​ಗೆ ಹೋಗಿ, ಅಲ್ಲಿನ ಏಳುಮಂದಿಯನ್ನು ಕರೆದುಕೊಂಡು ಹೋಗಿದ್ದಾನೆ. ಅದಾದ ನಂತರ ಮುಖ್ಯಶಿಕ್ಷಕರು ತರಗತಿ ಪರಿಶೀಲನೆಗೆ ಬಂದು, ಈ ವಿದ್ಯಾರ್ಥಿಗಳ ಬಗ್ಗೆ ಕೇಳಿದ್ದಾರೆ. ಆದರೆ ಉಳಿದ ವಿದ್ಯಾರ್ಥಿಗಳು ಉತ್ತರ ಕೊಡಲಿಲ್ಲ ಎಂದು ತಿಳಿಸಿದ್ದಾರೆ. ಏಳೂ ವಿದ್ಯಾರ್ಥಿಗಳನ್ನೂ ಹೊಡೆದಿದ್ದೇನೆ. ಆದರೆ ಈ ವಿದ್ಯಾರ್ಥಿ ಸುಳ್ಳು ಹೇಳಿದ್ದಾನೆ. ಉಳಿದವರು ಕೂಡ ತರಗತಿ ಬಂಕ್​ ಮಾಡಲು ಕಾರಣನಾಗಿದ್ದಾನೆ. ಹಾಗಾಗಿ ಸ್ವಲ್ಪ ಜಾಸ್ತಿ ಪ್ರಮಾಣದಲ್ಲಿ ಹೊಡೆದಿದ್ದೇನೆ ಎಂದು ಶಿಕ್ಷಕರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಜಮ್ಮು-ಕಾಶ್ಮೀರ : ಮೂವರು ಲಷ್ಕರ್ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement