ಕೇರಳದಲ್ಲಿ ಮಳೆಗೆ ಕೊಚ್ಚಿಹೋದ ಮೂರು ತಲೆಮಾರುಗಳ ಆರು ಜನರ ಕುಟುಂಬ..!

ತಿರುವನಂತಪುರಂ: ಕೇರಳದ ಕೂಟಕ್ಕಲ್‌ ನ ಕವಳಿಯಲ್ಲಿ  ಇಡೀ ಕುಟುಂಬ – ಅಜ್ಜಿ, ತಂದೆ, ತಾಯಿ ಮತ್ತು ಮೂವರು ಹೆಣ್ಣುಮಕ್ಕಳು – ಅಕ್ಟೋಬರ್ 16 ರ ಶನಿವಾರ ಮಳೆಗೆ ಕೊಚ್ಚಿ ಹೋಗಿದ್ದಾರೆ. ಅಲ್ಲಿ ಶನಿವಾರ ಭೂಕುಸಿತ ಸಂಭವಿಸಿದೆ. ಒಟ್ಟಲಂಗಲ್ ಮಾರ್ಟಿನ್ ಅವರ ಮನೆ ಸಂಪೂರ್ಣವಾಗಿ ಕೊಚ್ಚಿಹೋಗಿದೆ, ಮತ್ತು ಅದರೊಂದಿಗೆ ಕುಟುಂಬದ ಆರು ಮಂದಿ ಸಹ. ಅವರಲ್ಲಿ ಮೂವರ … Continued

ಪೊಲೀಸರಿಗೆ ತ್ರಿಶೂಲ ಕೊಟ್ಟು ಹಿಂಸೆಯ ದೀಕ್ಷೆ ಕೊಡಿ: ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಪೊಲೀಸರ ಡ್ರೆಸ್‌ ಮಾತ್ರ ಯಾಕೆ ಬದಲಾಯಿಸಿದ್ದೀರಿ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ ಎಂದು ಸರ್ಕಾರವನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆ ಮತ್ತು ಉಡುಪಿಯ ಕಾಪು ಠಾಣೆಯ ಸಿಬ್ಬಂದಿ ಕೇಸರಿ ಶಾಲು … Continued

ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನದ ಆರೋಪ: ಆರೋಪಿ ಬಂಧನಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಹುಬ್ಬಳ್ಳಿ: ಇಲ್ಲಿನ ಭೈರಿದೇವರಕೊಪ್ಪದ ಸರ್ವಧರ್ಮ ಪ್ರಾರ್ಥನಾ ಮಂದಿರದಲ್ಲಿ ಮತಾಂತರಕ್ಕೆ ಪ್ರಚೋದನೆ‌ ಮಾಡುತ್ತಿದ್ದ ಸೋಮಲಿಂಗ ಅವರಾದಿ ಎಂಬವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ನವನಗರದ ಪೊಲೀಸ್ ಠಾಣೆ ಮುಂದೆ ಭಾನುವಾರ ಪ್ರತಿಭಟನೆ ‌ನಡೆಸಿದರು. ವಿವಾರದ ವಿಶೇಷ ಪ್ರಾರ್ಥನೆಗೆ ಕರೆದುಕೊಂಡ ಬಂದ 7-8 ಜನರನ್ನು ಮತಾಂತರಕ್ಕೆ ಯತ್ನಿಸಲಾಗಿದೆ ಎಂಬುದು … Continued

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ; ವಿಮಾನದಲ್ಲಿ ಬಳಸುವ ಇಂಧನಕ್ಕಿಂತ 30%ಕ್ಕಿಂತ ಹೆಚ್ಚು ದುಬಾರಿ..!

ನವದೆಹಲಿ: ಜನಸಾಮಾನ್ಯರು ತಮ್ಮ ಕಾರು ಹಾಗೂ ದ್ವಿಚಕ್ರ ವಾಹನಗಳಿಗೆ ಬಳಸುವ ಪೆಟ್ರೋಲ್‍ನ ಬೆಲೆ ವಿಮಾನಗಳಿಗೆ ಬಳಸುವ ಇಂಧನಕ್ಕಿಂತಲೂ ಈಗ ದುಬಾರಿಯಾಗಿದೆ…! ನಾಔಉ ವಾಹನಗಳಿಎ ಬಳಸುವ ಪೆಟ್ರೋಲ್‌ ದರವು ವಿಮಾನಗಳಲ್ಲಿ ಬಳಸುವ ಒಂದು ಲೀಟರ್ ಟರ್ಬೈನ್ ಇಂಧನ(ಎಟಿಎಫ್)ಕ್ಕಿಂತ .ಶೇ.33ರಷ್ಟು ಹೆಚ್ಚಳವಅಗುವ ಮೂಲಕ ದೇಶದಲ್ಲೇ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಭಾನುವಾರ ಕೂಡ ಪೆಟ್ರೋಲ್, ಡೀಸೆಲ್ ಬೆಲೆ 35 ಪೈಸೆ … Continued

ಪ್ರೀತಿಸಿ ಮದುವೆಯಾದವಳ ಕೊಂದು ಅವಳ ಚಿನ್ನಾಭರಣದೊಂದಿಗೆ ಠಾಣೆಗೆ ಬಂದು ಶರಣಾದ ಆರೋಪಿ

ಶಿವಮೊಗ್ಗ: ಪ್ರೀತಿಸಿ ಮದುವೆಯಾದ ಪತ್ನಿಯ ಶೀಲ ಶಂಕಿಸಿದ ಗಂಡ ಆಕೆಯ ಕೊಲೆ ಮಾಡಿದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಅಲ್ಲದೆ, ಕೊಲೆ ಮಾಡಿದ ನಂತರ ಪತ್ನಿಯ ಮೈಮೇಲಿದ್ದ ಒಡವೆಗಳೊಂದಿಗೆ ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ. ಆಯನೂರು ಮೂಲದ 21 ವರ್ಷದ ಫಿಜಾ ಕೌಸರ್ (21) ಎಂಬವಳು ಪತಿಯಿಂದಲೇ ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಆಯನೂರಿನಿಂದ … Continued

ದುಬೈ:ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಅನಿವಾಸಿ ಭಾರತೀಯರಿಗೆ‌ ಕೈಗಾರಿಕಾ ‌ಸಚಿವ ‌ನಿರಾಣಿ‌ ಆಹ್ವಾನ

ದುಬೈ: ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ರಾಜ್ಯದ ಬೃಹತ್ ‌ಮತ್ತು ಮಧ್ಯಮ ಕೈಗಾರಿಕಾ ‌ ಸಚಿವ ‌ಮುರುಗೇಶ್ ನಿರಾಣಿ‌ ಆಹ್ವಾನಿಸಿದ್ದು, ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದರೆ, ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಹೇಳಿದ್ದಾರೆ. ದುಬೈನಲ್ಲಿ ಬಸವ‌ ಸಮಿತಿ ‌ವತಿಯಿಂದ‌ ಏರ್ಪಡಿಸಿದ್ದ ಬಸವ‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ … Continued

ಕರ್ನಾಟಕದಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಇಳಿಕೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ತೈಲ ಬೆಲೆ ಏರಿಕೆಯಿಂದ ಜನ ಎಲ್ಲ ಸಾಮಗ್ರಿಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಈಗ ಕೊಂಚ ನಿಟ್ಟುಸಿರು ಬಿಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಬಂದಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಮತ್ತು ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಅವರು ಸುಳಿವು ನೀಡಿದ್ದಾರೆ. ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ಬೆಲೆ … Continued

ಮಹಾತ್ಮರ ಬಿಡದ ಟೀಕಾಕಾರರು, ನನ್ನಂಥ ಹುಲು ಮಾನವರನ್ನು ಬಿಡುತ್ತಾರೆಯೇ:ಎಚ್‌ಡಿಕೆಗೆ ಮಾರ್ಮಿಕವಾಗಿ ತಿವಿದ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮತ್ತೊಬ್ಬ ಮಾಝಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುಎಇರು ಟ್ವೀಟ್‌ ಮಾಡಿರುವ ಅವರು, ಮಾಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದುಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ … Continued

ಬೆಂಗಳೂರಿನಿಂದ ಹೊರಟ ಲಾರಿಯಿಂದ 7 ಕೋಟಿ ರೂ.ಮೌಲ್ಯದ 9,000 ಮೊಬೈಲ್ ಫೋನ್ ಲೂಟಿ…!

ಮಥುರಾ: ಸುಮಾರು 7 ಕೋಟಿ ರೂ.ಗಳ ಮೌಲ್ಯದ 9 ಸಾವಿರ ಮೊಬೈಲ್​ ಫೋನ್​​ಗಳನ್ನು ಒಯ್ಯುತ್ತಿದ್ದ ಬೆಂಗಳೂರು ಮೂಲದ ಟ್ರಕ್​​​ ಅನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಲಾರಿಯನ್ನು ಮಧ್ಯಪ್ರದೇಶದ ಶಿಯೋಪುರ್​​ ಎಂಬಲ್ಲಿ ದುಷ್ಕರ್ಮಿಗಳು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿ, ವಾಹನದಿಂದ ಎತ್ತಿ ಎಸೆದಿದ್ದಾರೆ. ಆ ನಂತರ ಲಾರಿಯನ್ನು ಲೂಟಿ ಮಾಡಿದ್ದಾರೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದರೂ ಉತ್ತರಪ್ರದೇಶದ ಮಥುರಾದಲ್ಲಿ … Continued

ಬಸ್-ಮ್ಯಾಕ್ಸಿ ಕ್ಯಾಬ್‌ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರ ಸ್ಥಿತಿ ಗಂಭೀರ

ತುಮಕೂರು: ತುಮಕೂರು-ಶಿವಮೊಗ್ಗ ಹೆದ್ದಾರಿಯಲ್ಲಿ ಬಸ್-ಮ್ಯಾಕ್ಸಿ ಕ್ಯಾಬ್‌ ಮಧ್ಯೆ ಮಧ್ಯೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಗೊಲ್ಲಹಳ್ಳಿಯ ಬಳಿ ಇಂದು ಬೆಳಗಿನ ಜಾವ 5.30ರ ಸಮಯದಲ್ಲಿ ಸಂಭವಿಸಿದೆ. ಮೃತರನ್ನು ಕವಿತಾ(38), ದರ್ಶನ್(22), ದಿವಾಕರ್(25), ಕೃಷ್ಣಮೂರ್ತಿ(25)ಎಂದು ಗುರುತಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮೃತರು ಮ್ಯಾಕ್ಸಿ ಕ್ಯಾಬ್​ನಲ್ಲಿ ತುಮಕೂರಿನ ಮಾರುಕಟ್ಟೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಅಪಘಾತ … Continued