ಪಶ್ಚಿಮ ಬಂಗಾಳ: ಬಿಜೆಪಿ ಯುವ ಮೋರ್ಚಾ ನಾಯಕನ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ.
ಪಶ್ಚಿಮಬಂಗಾಳದ ಉತ್ತರ ದಿನಾಜ್​ಪುರ ಜಿಲ್ಲೆಯ ಇಟಾಹಾರ್​​ನಮಿಥುನ್​ ಘೋಷ್​ ಮೃತ ಯುವ ನಾಯಕ.ಈ ಘಟನೆ ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ನಡೆದಿದೆ. ರಾಜ್​ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಮಿಥುನ್ ಘೋಷ್​​ ನಿಂತಿದ್ದರು. ಮೋಟಾರ್​ ಬೈಕ್​ನಲ್ಲಿ ಅಲ್ಲಗೆ ಬಂದ ಕೆಲವರು ಗುಂಡು ಹಾರಿಸಿದ್ದಾರೆ. ಅವರನ್ನು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಾಜ್​ಗ್ರಾಮ ಹಳ್ಳಿಯಲ್ಲಿರುವ ಇವರ ಮನೆಯ ಮುಂದೆಯೇ ದುಷ್ಕರ್ಮಿಗಳು ಮಿಥುನ್​ಗೆ ಗುಂಡಿಕ್ಕಿ ಕೊಂದಿದ್ದಾರೆ. ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಆಗಿದೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಟ್ವೀಟ್ ಮಾಡಿ, ಮಿಥುನ್​ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್​​ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್​ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನರ ಅಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ. ಮಿಥುನ್​ ಘೋಷ್ ಸದಾ ನೆನಪಿರುತ್ತಾರೆ ಎಂದು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್​ ಶಾಸಕ ಮೊಹಾರಾಫ್​ ಹುಸ್ಸೇನ್​, ನಮ್ಮ ತೃಣಮೂಲ ಕಾಂಗ್ರೆಸ್​ಗೂ, ಮಿಥುನ್​ ಘೋಷ್​​ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಬೇರೆಯವರು ಇನ್ಯಾವುದೇ ದ್ವೇಷದ ಕಾರಣಕ್ಕೆ ಈ ಹತ್ಯೆ ಮಾಡಿಬಹುದು. ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದು ಹೇಳಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಮಿಥುನ್​ ಘೋಷ್​ಗೆ ಈಗಾಗಲೇ ಹಲವು ಬಾರಿ ಜೀವ ಬೆದರಿಕೆ ಹಾಕಲಾಗಿತ್ತು. ಕೆಲವು ಬಾರಿ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು. ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೆವು. ಆದರೆ ಪೊಲಿಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಜ್​​ಪುರ ಬಿಜೆಪಿ ಅಧ್ಯಕ್ಷ ವಸುದೇವ್​ ಸರ್ಕಾರ್​ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement