ಮುದ್ದೆಯಲ್ಲಿ ವಿಷ ಹಾಕಿ ತಂದೆ, ತಾಯಿ ಸೇರಿ ನಾಲ್ವರ ಹತ್ಯೆ ಮಾಡಿದಳೇ ಬಾಲಕಿ..!

ಚಿತ್ರದುರ್ಗ: 17 ವರ್ಷದ ಬಾಲಕಿಯೊಬ್ಬಳು ಇಡೀ ಕುಟುಂಬಕ್ಕೆ ಮುದ್ದೆಯಲ್ಲಿ ವಿಷ ಬೆರೆಸಿ ನಾಲ್ವರ ಹತ್ಯೆಗೈದಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ಜುಲೈ 12ರಂದು ಈ ಘಟನೆ ನಡೆದಿತ್ತು.  ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‍ಎಸ್‍ಎಲ್) ವರದಿ ಬಂದ ನಂತರ ಮುದ್ದೆಯಲ್ಲಿ ವಿಷ ಬೆರಸಿರುವುದು ಈಗ ಬಯಲಾಗಿದೆ.
ಪೋಷಕರ ಬೈಗುಳ, ತನ್ನನ್ನು ಕೂಲಿಗೆ ಕಳುಹಿಸುವುದು, ತಿರಸ್ಕಾರ ಭಾವದಿಂದ ನೋಡುತ್ತಿದ್ದುದರಿಂದ ನೊಂದ ಬಾಲಕಿ ತನ್ನ ಹೆತ್ತವರು, ಒಡಹುಟ್ಟಿದವರಿಗೆ ಮುದ್ದೆಯಲ್ಲಿ ಕ್ರಿಮಿನಾಶಕ ಬೆರೆಸಿ ಕೊಂದಿರುವುದು ಬಯಲಾಗಿದೆ.
ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು ರಾತ್ರಿ ಮುದ್ದೆ ಹಾಗೂ ಹೆಸರುಕಾಳು ಸಾಂಬಾರ್ ಸೇವಿಸಿದ ತಂದೆ ತಿಪ್ಪಾನಾಯ್ಕ್(46), ತಾಯಿ ಸುಧಾಬಾಯಿ(43), ಸಹೋದರಿ ರಮ್ಯ(16), ವೃದ್ಧೆ ಗುಂಡಿಬಾಯಿ(75) ಸಾವಿಗೀಡಾಗಿದ್ದರು.
ಮತ್ತೋರ್ವ ಪುತ್ರ ರಾಹುಲ್(18) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾನೆ. ಈ ಬಾಲಕಿಗೆ ಮಾತ್ರ ಏನೂ ಆಗಿರಲಿಲ್ಲ. ಹೀಗಾಗಿ ವಿಚಾರಿಸಿದಾಗ ತನಗೆ ಹೊಟ್ಟೆ ನೋವಿನ ಕಾರಣ ಅನ್ನ, ಸಾರು ಮಾತ್ರ ಸೇವಿಸಿರುವುದಾಗಿ ಬಾಲಕಿ ತಿಳಿಸಿದ್ದಳು, ಇದರಿಂದ ಮತ್ತಷ್ಟು ಅನುಮಾನಗೊಂಡ ಪೊಲೀಸರು ಈ ಕುರಿತಂತೆ ವಿಚಾರಣೆ ನಡೆಸಿದಾಗ, ಬಾಲಕಿಯೇ ವಿಷಬೆರೆಸಿ ನಾಲ್ವರನ್ನು ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ. ಹೀಗಾಗಿ ಬಾಲಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಭರಮಸಾಗರ ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement