ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನದ ಆರೋಪ: ಸೋಮು ಅವರಾದಿ ಪೊಲೀಸ್ ವಶಕ್ಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ಮಾಡಿದ ಆರೋಪದ ಮೇಲೆ ಪಾಸ್ಟರ್‌ ಸೋಮು ಅವರಾದಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವನಗರ ಎಪಿಎಂಸಿ ಠಾಣೆ ಪೊಲೀಸರು ಸೋಮು ಅವರಾದಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.
ನವನಗರದ ಚರ್ಚ್ ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ನಡೆಸಲು ಪ್ರಯತ್ನಿಸಲಾಗಿತ್ತು ಎಂದು ಆರೋಪಿಸಲಾಗಿತ್ತು. ಚರ್ಚಿಗೆ ತೆರಳಿದ್ದ ಹಿಂದೂಪರ ಸಂಘಟನೆಗಳ ಮುಖಂಡರು ಅಲ್ಲಿಯೇ ಭಜನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರ ನೇತೃತ್ವದಲ್ಲಿ ನವನಗರದ ಬಳಿ ರಸ್ತೆ ತಡೆ ನಡೆದಿತ್ತು. ಆದರೆ ಯಾವುದೇ ಕ್ರಮವಾದ ಕಾರಣ
ತಡರಾತ್ರಿಯ ತನಕ ನವನಗರದ ಎಪಿಎಂಸಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಶಾಸಕ ಅರವಿಂದ ಬೆಲ್ಲದ ಪಾಲ್ಗೊಂಡಿದ್ದರು ಹಾಗೂ ಅವರಾದಿ ಬಂಧನಕ್ಕೆ ಪಟ್ಟು ಹಿಡಿಯಲಾಗಿತ್ತು. ಪೊಲೀಸ್ ಕಮಿಷನರ್ ಲಾಭುರಾಮ್ ಕಾನೂನು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು. ಇದೀಗ ಸೋಮು ಅವರಾದಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement