ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲರ ವಿರುದ್ಧ ಎಫ್​ಐಆರ್ ದಾಖಲು

ಮಂಗಳೂರು: ಮಂಗಳೂರಿನ ಖ್ಯಾತ ವಕೀಲ ಕೆ.ಎಸ್‌.ಎನ್‌.ರಾಜೇಶ್ ಭಟ್ ವಿರುದ್ಧ ಇಂಟರ್ನ್‌ಶಿಪ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ಎಲ್‌ಬಿ ವಿದ್ಯಾರ್ಥಿನಿ ದೂರು ಅಧರಿಸಿ ನಿನ್ನೆ ರಾತ್ರಿ (ಸೋಮವಾರ ರಾತ್ರಿ) ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, ನಗರದ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪನಿಗಳಿಗೆ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜೇಶ್ ಕಚೇರಿಗೆ ವಿದ್ಯಾರ್ಥಿನಿ ಇಂಟರ್ನ್‌ಶಿಪ್‌ಗೆ ಬರುತ್ತಿದ್ದರು. ಸಂತ್ರಸ್ತ ಯುವತಿ ರಾಜೇಶ್ ವಿರುದ್ಧ ನಿನ್ನೆ(ಅಕ್ಟೋಬರ್ 18) ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಎಫ್‌ಐಆರ್ ದಾಖಲಿಸಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement