ಸ್ನೇಹಿತನ ಕಾಪಾಡಲು ಹೋಗಿ ಇಬ್ಬರು ಯುವಕರು ನೀರು ಪಾಲು

ಕೊಪ್ಪಳ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತರನ್ನು ರಾಜೇಶಕುಮಾರ್(26) ಮತ್ತು ಮಧುಕಿರಣ್ (25) ಎಂದು ಗುರುತಿಸಲಾಗಿದೆ. ಇವರು ಹೈದರಾಬಾದ್‌ ಮೂಲದವರಾಗಿದ್ದಾರೆ. ಗಂಗಾವತಿಯ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರ ಕಾರ್ಯಾಚರಣೆಯ ನಂತರ ಮೃತ ದೇಹ ಸಿಕ್ಕಿದೆ. ಪ್ರವಾಸಕ್ಕೆ ಬಂದಿರುವ ನಾಲ್ವರು ಯುವಕರು ಸಾಣಾಪುರ ಕೆರೆ ದಡದ ಮೇಲೆ ಸ್ನಾನಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಪ್ರವಾಸಕ್ಕೆ ಬಂದ ನಾಲ್ವರ ಪೈಕಿ ಕೇವಲ ಒಬ್ಬರಿಗೆ ಮಾತ್ರ ಈಜು ಬರುತ್ತಿತ್ತು. ಅಲೋಕಕುಮಾರ್ ಮಾತ್ರ ಕೆರೆಯಲ್ಲಿ ಈಜಲು ಇಳಿದಿದ್ದ, ಉಳಿದ ಮೂವರು ಕೆರೆ ದಡದ ಬಂಡೆಯ ಮೇಲೆ ಕುಳಿತು ಸ್ನಾನ ಮಾಡುತ್ತಿದ್ದರು. ಅಲೋಕಕುಮಾರ್ ಸ್ವೀಮೀಂಗ್ ಮುಗಿಸಿಕೊಂಡು ಮೇಲೆ ಬಂದ ಮೇಲೆ ಬಂಡೆಯ ಮೇಲೆ ಕುಳಿತು ಸ್ನಾನ ಮಾಡುತ್ತಿದ್ದ ನರಸಿಂಹ ಎಂಬಾತ ಕಾಲು ಜಾರಿ ಕೆರಯಲ್ಲಿ ಬಿದ್ದಿದ್ದಾನೆ. ಆತನನ್ನು ಕಾಪಡಲು ಈಜು ಬಾರದ ರಾಜೇಶ್ ಮತ್ತು ಮಧು ಕಿರಣ ಕೆರೆಗೆ ಹಾರಿದ್ದಾರೆ. ಇದನ್ನು ನೋಡಿದ ಅಲೋಕ್ ಮೂವರನ್ನು ಕಾಪಾಡಲು ತಾನೂ ಕೆರೆಗೆ ಹಾರಿದ್ದಾನೆ. ಆದರೆ ನರಸಿಂಗನನ್ನು ಮಾತ್ರ ಸಾಧ್ಯವಾಯಿತು. ನರಸಿಂಗ್‍ನನ್ನು ದಡಕ್ಕೆ ತರುವಷ್ಟರಲ್ಲಿ ತನ್ನ ಇನ್ನಿಬರು ಸ್ನೇಹಿತರು ನೀರುಪಾಲಾಗಿದ್ದರು. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement