ತುಮಕೂರು: ಕೆಎಸ್ಆರ್ಟಿಸಿ ಬಸ್ಸನ್ನೇ ಖದೀಮರು ಕದ್ದಿರುವ ಘಟನೆಯೊಂದು ವರದಿಯಾಗಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುಬ್ಬಿ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಕದ್ದ ಕಳ್ಳರು, ಜನ್ನೇನಹಳ್ಳಿ ಎಂಬ ಗ್ರಾಮದ ಬಳಿ ಬಿಟ್ಟು ಹೋಗಿದ್ದಾರೆ. ಬಸ್ ಬಿಟ್ಟುಹೋಗುವ ಮೊದಲು ಕಳ್ಳರು ಎಡೆಯೂರು, ಕುಣಿಗಲ್, ಅಮೃತೂರು ಸುತ್ತಾಡಿ ಜನ್ನೆನಹಳ್ಳಿಗಳಲ್ಲಿ ಬಸ್ ನಲ್ಲಿ ಸುತ್ತಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಬಸ್ ಬಿಟ್ಟು ಹೋಗುವಾಗ ಬಸ್ಸಿನಲ್ಲಿದ್ದ ಡೀಸೆಲ್ ಸಂಪೂರ್ಣ ಖಾಲಿಯಾಗಿತ್ತು. ಹೀಗಾಗಿ ಬಸ್ಸಿನಿಂದ ಡೀಸೆಲ್ ಕದ್ದ ಬಳಿಕ ಕಳ್ಳರು ಅಲ್ಲಿ ಬಿಟ್ಟು ಹೋಗಿರಬಹುದೆಂಬ ಅನುಮಾನವಿದೆ.
ಗುಬ್ಬಿ ಬಸ್ ನಿಲ್ದಾಣದಲ್ಲಿ ಇಂಥ ಪ್ರಕರಣಗಳು ನಡೆಯುತ್ತಿದ್ದರೂ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಸಿಸಿಟಿವಿಯನ್ನು ಸಹ ಅಳವಡಿಸಿಲ್ಲ. ಈ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ