ಉತ್ತರಾಖಂಡ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ

ಬೆಂಗಳೂರು: ಉತ್ತರಾಖಂಡದಲ್ಲಿ ಮಳೆಯ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ತಲೆ ದೋರಿದ್ದು. ಪ್ರವಾಹದಲ್ಲಿ ಸಿಲುಕಿದ ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ‘ಉತ್ತರಾಖಂಡದ ಪ್ರವಾಹದಲ್ಲಿ ಜನರು, ಪ್ರಯಾಣಿಕರು, ಯಾತ್ರಿಕರು, ಪ್ರವಾಸಿಗರು ಮತ್ತು ಸಂದರ್ಶಕರು ಸಿಲುಕಿಕೊಂಡಿದ್ದರೆ ಅವರ ಸಂಬಂಧಿಕರು, ಸ್ನೇಹಿತರು ಈ ಹೆಲ್ಪ್‌ ಡೆಸ್ಕ್‌ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.
ಕರ್ನಾಟಕದ ತುರ್ತು ಸಹಾಯವಾಣಿ ಸಂಖ್ಯೆ: 080 – 1070 (Toll Free) ಮತ್ತು 080 – 2234 0676 -ಈ ಸಂಖ್ಯೆಯು ದಿನದ ಎಲ್ಲಾ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಉತ್ತರಾಖಂಡದಲ್ಲಿ ಸಿಲುಕಿರುವ ಕನ್ನಡಿಗರು ಅಥವಾ ಅವರ ಸಂಬಂಧಿಕರು ಈ ಸಹಾಯವಾಣಿ ಸಂಪರ್ಕಿಸಬಹುದು ಮತ್ತು ಉತ್ತರಾಖಂಡದ​ ಪ್ರವಾಹದಲ್ಲಿ ಸಿಲುಕಿರುವವರ ಬಗ್ಗೆ ಮಾಹಿತಿ ನೀಡಬಹುದು. ಅದನ್ನು ಅಲ್ಲಿನ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟವರಿಗೆ ಕಾರ್ಯಾಚರಣೆಗೆ ಸಹಾಯವಾಗುವಂತೆ ಕಳುಹಿಸಿಕೊಡಲಾಗುತ್ತದೆ ಹಾಗೂ ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದುಸಚಿವ ಅಶೋಕ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement