ಬೆಂಗಳೂರು ಜಲಮಂಡಳಿ ನಿವೃತ್ತ ಮುಖ್ಯ ಎಂಜಿನಿಯರ್ ಆಸ್ತಿ ಜಪ್ತಿ ಮಾಡಿದ ಇಡಿ

ಬೆಂಗಳೂರು: ಬೆಂಗಳೂರು ಜಲ ಮಂಡಳಿ (BWSSB) ನಿವೃತ್ತ ಮುಖ್ಯ ಎಂಜಿನಿಯರ್​ ಎಸ್.ಎಂ.ಬಸವರಾಜ್ ಅವರಿಗೆ ಸೇರಿದ ₹ 7.48 ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
2018ರಲ್ಲಿ ಇವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿ ತನಿಖೆ ನಡೆಸುವಂತೆ ವಿನಂತಿಸಿ ಪತ್ರ ಬರೆದಿದ್ದರು.
ಬೆಂಗಳೂರು, ಮೈಸೂರಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಸಂಪತ್ತು ಪತ್ತೆ ಹಚ್ಚಿತ್ತು . ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅವರ ಬ್ಯಾಂಕ್ ಖಾತೆಯನ್ನು ಸಂಪೂರ್ಣವಾಗಿ ಜಪ್ತಿ ಮಾಡಿದೆ. ₹ 7.48 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. 3.41 ಕೆಜಿ ಚಿನ್ನ, ವಜ್ರದ ಆಭರಣಗಳು, 2 ನಿವೇಶನಗಳು, ವಾಣಿಜ್ಯ ಸಂಕೀರ್ಣ ಹಾಗೂ ಬೆಂಗಳೂರು ಮತ್ತು ಮೈಸೂರಿನಲ್ಲಿ ಆರು ವಸತಿ ಗೃಹಗಳು ಇದರಲ್ಲಿ ಸೇರಿವೆ. ಎಸ್.ಎಂ.ಬಸವರಾಜ್ ಇತರ ಕುಟುಂಬದ ಸದಸ್ಯರ ಹೆಸರಲ್ಲಿಯೂ ಸ್ಥಿರ ಮತ್ತು ಚರಾಸ್ತಿಗಳನ್ನು ಖರೀದಿ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement