ಪ್ರಜ್ಞೆ ತಪ್ಪಿದ ಪ್ರಯಾಣಿಕ: ಇಂದೋರ್​​ನಲ್ಲಿ ತುರ್ತು ಲ್ಯಾಂಡ್ ದೆಹಲಿ ವಿಮಾನ; ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ವ್ಯಕ್ತಿ ಸಾವು!

ಬೆಂಗಳೂರು: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಪ್ರಯಾಣಿಕರೊಬ್ಬರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿ, ಪ್ರಜ್ಞೆ ತಪ್ಪಿದ ಕಾರಣ ಅವರಿಗೆ ತುರ್ತಾಗಿ ವೈದ್ಯಕೀಯ ಚಿಕಿತ್ಸೆ ಕೊಡಿಸಲು ವಿಮಾನವನ್ನು ಇಂದೋರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು. ಆದರೆ ಇಂದೋರ್ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಮೃತಪಟ್ಟ ಘಟನೆ ವರದಿಯಾಗಿದೆ.
ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರನ್ನು ಮನೋಜಕುಮಾರ್ ಅಗರ್​ವಾಲ್ ಎಮದು ಗುರುತಿಸಲಾಗಿದೆ. 50 ವರ್ಷದ ಮನೋಜಕುಮಾರ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ನಿನ್ನೆ (ಗುರುವಾರ) ರಾತ್ರಿ 9.30ಕ್ಕೆ ವಿಮಾನ ಇಂದೋರ್​ನಲ್ಲಿ ವಿಮಾನವನ್ನು ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿ, ಆಸ್ಪತ್ರೆಗೆ ಸೇರಿಸಿದರೂ ಪ್ರಯಾಣಿಕ ಬದುಕಲಿಲ್ಲ.
ಮನೋಜ್ ಕುಮಾರ್ ಉದ್ಯಮಿಯಾಗಿದ್ದು, ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವಾಪಸ್ ದೆಹಲಿಗೆ ಹೊರಟಿದ್ದರು. ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರವಾಲ್ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆಯಾಗಿ ಈ ಬಗ್ಗೆ ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣ ಅವರು ಪ್ರಜ್ಞೆ ತಪ್ಪಿದರು. ಹೀಗಾಗಿ, ಪೈಲಟ್ ವಿಮಾನವನ್ನು ಇಂದೋರ್​ನತ್ತ ತಿರುಗಿಸಿದರು. ತಕ್ಷಣ ಮನೋಜ್ ಕುಮಾರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ಇಂದೋರ್ ವಿಮಾನ ನಿಲ್ದಾಣದ ಉಸ್ತುವಾರಿ ನಿರ್ದೇಶಕ ಪ್ರಮೋದ್ ಕುಮಾರ್ ಶರ್ಮಾ ತಿಳಿಸಿದ್ದಾರೆ.ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement