ಮೈಸೂರು: ಮೈಸೂರಿನ ಶ್ರೀನಗರದಲ್ಲಿನ ಮನೆಯೊಂದಕ್ಕೆ ನುಗ್ಗಿದ ಪುತ್ರನೇ ತಂದೆ ಹಾಗೂ ತಂದೆಯ ಜೊತೆಗಿದ್ದ ಮಹಿಳೆಯನ್ನು ಬರ್ಬರವಾಗಿ ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಬೆಳ್ಳಬೆಳಿಗ್ಗೆ ನಡೆದ ಈ ಜೋಡಿಕೊಲೆಯಿಂದಾಗಿ ಸಾಂಸ್ಕೃತಿಕ ನಗರಿ ಬೆಚ್ಚಿಬಿದ್ದಿದೆ.
ಈ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಪ್ರಕಾಶ್ ಮತ್ತು ಲತಾ ಅವರನ್ನು ಹತ್ಯೆಗೈದು ಪುತ್ರ ಸಾಗರ್ ಪರಾರಿಯಾಗಿದ್ದಾನೆ.
ಆರೋಪಿ ಸಾಗರ್ ಹಲ್ಲೆ ಮಾಡುತ್ತಿದ್ದಾಗ ಲತಾ ಅವರ ಪುತ್ರ ನಾಗಾರ್ಜುನ್ ತಡೆಯಲು ಬಂದಾಗ ಆತನ ಮೇಲೂ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ನಾಗಾರ್ಜುನ್ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ದಕ್ಷಿಣ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಸಾಗರನನ್ನು ಸೆರೆಹಿಡಿಯಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ