ಪ್ರಯಾಣಿಕರ ಗಮನಕ್ಕೆ.. ದೀಪಾವಳಿ ಹಬ್ಬದ ಪ್ರಯುಕ್ತ ಎನ್‌ಡಬ್ಲ್ಯುಕೆಆರ್‌ಟಸಿಯಿಂದ 600ಕ್ಕಿಂತ ಹೆಚ್ಚು ವಿಶೇಷ ಬಸ್‌ ಸಂಚಾರ

ಹುಬ್ಬಳ್ಳಿ:ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 600ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳನ್ನು ಬಿಡಲಾಗುತ್ತಿದೆ.
ಅಕ್ಟೋಬರ್‌ 31ರಂದು ಭಾನುವಾರ, ನವಂಬರ್ 1.ರಂದು ಕನ್ನಡ ರಾಜ್ಯೋತ್ಸವ ನವಂಬರ್‌ 3ರಂದು ನರಕ ಚತುರ್ದಶಿ ನವಂಬರ್‌ 5ರಂದು ಬಲಿಪಾಡ್ಯ ಮತ್ತು 7 ರಂದು ಭಾನುವಾರ ಇರುವ ಹಬ್ಬದ ರಜೆಗಳನ್ನು ಉಪಯೋಗಿಸಿಕೊಂಡು ದೀಪಾವಳಿ ಹಬ್ಬಕ್ಕೆ ಬಂದು ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 30 ಹಾಗೂ 31ರಂದು ಬೆಂಗಳೂರು, ಮಂಗಳೂರು, ಹೈದರಾಬಾದ್, ಪಣಜಿ, ಪುಣೆ, ಮುಂಬಯಿ ಮತ್ತು ಇನ್ನಿತರ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಸ್ವಂತ ಊರುಗಳಿಗೆ ಹಬ್ಬಕ್ಕಾಗಿ ತೆರಳು ಹೆಚ್ಚುವರಿ ಬಸ್ಸುಗಳನ್ನಿ ಬಿಡಲಾಗುತ್ತಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು 600ಕ್ಕಿಂತ ಅಧಿಕ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಹಬ್ಬ ಮುಗಿದ ನಂತರ ಬೆಂಗಳೂರು, ಮತ್ತು ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಗಾಗಿ ನವೆಂಬರ್ 5, ಮತ್ತು 7ರಂದು ಸಹ ಬೇಡಿಕೆಗಳಿಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಆದ್ದರಿಂದ ಸಾವ೯ಜನಿಕರು ಸಂಸ್ಥೆಯ ಅಧಿಕೃತ ವೆಬಸೈಟ್ www.ksrtc.in ಅಥವಾ ksrtc mobile App ನಲ್ಲಿ ಮುಂಗಡವಾಗಿ ವೇಗದೂತ ಹಾಗೂ ಪ್ರತಿಷ್ಠಿತ ಸಾರಿಗೆಗಳಲ್ಲಿ ಟಿಕೆಟ್ ಗಳನ್ನು ಬುಕಿಂಗ್ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.
ಸಾರ್ವಜನಿಕ ಸರಕಾರವು ನಿಗದಿ ಪಡಿಸಿದ ಕೋವಿಡ್ ನಿಯಮಗಳನ್ನು ಅನುಸರಿಸುವದರೊಂದಿಗೆ ಈ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement