ಬೈಕ್‍ಗೆ ಡಿಕ್ಕಿ ಹೊಡೆದ ಟಿಪ್ಪರ್‌ ; ತಾಯಿ- ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ವೇಗವಾಗಿ ಬಂದ ಟಿಪ್ಪರ್ ಲಾರಿ ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಕೆಳಗೆ ಬಿದ್ದ ತಾಯಿ-ಮಗು ಮೇಲೆ ವಾಹನ ಹೋದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್‍ಎಎಲ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಗ್ಗೆ ನಡೆದಿದೆ.
ಮೃತರನ್ನು ಕೆ.ಆರ್.ಪುರಂ ನಿವಾಸಿ ಶ್ರೀದೇವಿ(21) ಮತ್ತು ಒಂದು ವರ್ಷದ ಗಂಡುಮಗು ದಕ್ಷಿತ್ ಎಂದು ಗುರುತಿಸಲಾಗಿದೆ.
ಮೂಲತಃ ತಮಿಳುನಾಡಿನ ಧರ್ಮಪುರಿಯವರಾದ ಶಿವಕುಮಾರ್ ಕೆ.ಆರ್.ಪುರಂನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು.
ಊರಿಗೆ ಹೋಗುವ ಸಲುವಾಗಿ ಪತ್ನಿ ಹಾಗೂ ಮಗುವನ್ನು ಬುಲೆಟ್ ಬೈಕ್‍ನಲ್ಲಿ ಕರೆದುಕೊಂಡು ಕೆ.ಆರ್.ಪುರಂನಿಂದ ತಮಿಳುನಾಡಿಗೆ ಹೋಗುತ್ತಿದ್ದರು.
ಮಾರತ್ತಹಳ್ಳಿ ರಿಂಗ್ ರಸ್ತೆ ಬಳಿ ಬೆಳಗ್ಗೆ 7.15ರ ಸುಮಾರಿನಲ್ಲಿ ಟಿಪ್ಪರ್ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಲಭಾಗಕ್ಕೆ ಬಿದ್ದ ತಾಯಿ-ಮಗುವಿನ ಮೇಲೆ ಟಪ್ಪಿರ್‌ ಹತ್ತಿದೆ. ಪರಿಣಾಮ ಸ್ಥಳದಲ್ಲೇ ಅವರಿಬ್ಬರು ಮೃತಪಟ್ಟಿದ್ದಾರೆ. ಶಿವಕುಮಾರ್ ಎಡಕ್ಕೆ ಬಿದ್ದಿದ್ದರಿಂದ ಗಾಯಗಳಾಗಿವೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement