ಕಲಬುರಗಿ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಹಚ್ಚಿಕೊಂಡ ತಾಯಿ: ತಾಯಿ-ಮಗಳು ಸಾವು, ಮಗನಿಗೆ ಗಂಭೀರ ಗಾಯ

ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ.
27 ವರ್ಷದ ದೀಕ್ಷಾ ಶರ್ಮಾ ಎಂಬವಳೇ ಮಕ್ಕಳಿಗೆ ಬೆಂಕಿ ಹಚ್ಚು ತಾನೂ ಆತ್ಮಹತ್ಯೆ ಮಾಡಿಕೊಂಡವಳು ಎಂದು ಗುರುತಿಸಲಾಗಿದೆ.
ದೀಕ್ಷಾ ಅವರ ಎರಡು ವರ್ಷದ ಪುತ್ರಿ ಸಿಂಚನಾ ತಾಯಿಯೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ 4 ವರ್ಷದ ಪುತ್ರ ಧನಂಜಯನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ಪತಿ ಇಲ್ಲದ ಸಂದರ್ಭದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಐದು ವರ್ಷಗಳ ಹಿಂದೆ ದೀಕ್ಷಾ-ಪಂಚಶೀಲ ನಗರದ ವಸಂತ ಶರ್ಮಾ ಅವರ ಮದುವೆಯಾಗಿತ್ತು. ಆದರೆ, ದೀಕ್ಷಾಗೆ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಮತ್ತು ತವರು‌ ಮನೆಗೆ ಕಳುಹಿಸುತ್ತಿರಲಿಲ್ಲ ಎನ್ನಲಾಗಿದೆ. ಸೋಮವಾರ ಕೂಡ ತವರು ಮನೆಗೆ ಹೋಗಲು ದೀಕ್ಷಾ ತಯಾರಿ ಆಗಿದ್ದಳು. ಆದರ, ಗಂಡನ ಮನೆಯಲ್ಲಿ ಅವಕಾಶ ನೀಡಿರಲಿಲ್ಲ ಎಂದು ಹೇಳಲಾಗಿದೆ. ಇದರಿಂದ ಬೇಸತ್ತು ಮಧ್ಯಾಹ್ನ ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.‌ ಇತ್ತೀಚೆಗೆ ತವರು ಮನೆಯಿಂದ ಹಣ ತರುವ ವಿಚಾರದಲ್ಲಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ದೀಕ್ಷಾ ಪೋಷಕರು ದೂರಿದ್ದು. ಮಹಿಳೆಯರ ಪೋಷಕರು ನೀಡಿದ ದೂರಿನ ಮೇರೆಗೆ ಗಂಡ ವಸಂತರಾವ್, ಅತ್ತೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement