ಲಖಿಂಪುರ್ ಹಿಂಸಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಇಬ್ಬರ ಬಂಧನ

ಲಖಿಂಪುರಖೇರಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ಎಂಟು ಜನರು ಮೃತಪಟ್ಟಿದ್ದು ಅವರಲ್ಲಿ ನಾಲ್ವರು ರೈತರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಸಾಗಿಸುತ್ತಿದ್ದ ವಾಹನ ರೈತರ ಮೇಲೆ ಹರಿದಿದೆ ಎಂದು ಆರೋಪಿಸಲಾಗಿದೆ.
ಇದರಿಂದ ಆಕ್ರೋಶಗೊಂಡ ರೈತರು ವಾಹನಗಳಲ್ಲಿದ್ದ ಕೆಲವರನ್ನು ಥಳಿಸಿದ್ದರು. ಘಟನೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು, ಓರ್ವ ಚಾಲಕ ಮತ್ತು ಪತ್ರಕರ್ತ ಸೇರಿದಂತೆ ನಾಲ್ವರು ಮೃತಪಟ್ಟಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗುರ್ವಿಂದರ್ ಸಿಂಗ್ ಮತ್ತು ವಿಚಿತ್ರ ಸಿಂಗ್ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಬಂಧಿಸಿದೆ. ಅಕ್ಟೋಬರ್ 4 ರಂದು ಸುಮಿತ್ ಜೈಸ್ವಾಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು ಎಂದು ಲಖೀಂಪುರ್ ಪೊಲೀಸ್ ಕ್ರೈಂ ಬ್ರಾಂಚ್ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಬಿಜೆಪಿ ವಾರ್ಡ್ ಸದಸ್ಯ ಜೈಸ್ವಾಲ್ ಬಂಧಿತರಾಗಿದ್ದಾರೆ.
ಬಹ್ರೈಚ್ ಮೂಲದ ಜಗಜಿತ್ ಸಿಂಗ್ ನೀಡಿದ ದೂರಿನ ಮೇರೆಗೆ ದಾಖಲಿಸಲಾದ ಮತ್ತೊಂದು ಎಫ್‌ಐಆರ್‌ನಲ್ಲಿ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಪ್ರಮುಖ ಸುದ್ದಿ :-   'ಐಸ್‌ಕ್ರೀಂ ಮ್ಯಾನ್‌' ಖ್ಯಾತಿಯ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ ಕಾಮತ್ ನಿಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement