ನವದೆಹಲಿ: ಏರ್ ಇಂಡಿಯಾದ ಎಲ್ಲ ಬಾಕಿಯನ್ನೂ ತಕ್ಷಣ ಚುಕ್ತಾ ಮಾಡಬೇಕು ಎಂದು ಕೇಂದ್ರ ಹಣಕಾಸು ಇಲಾಖೆಯು ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಬುಧವಾರ ಸೂಚಿಸಿದೆ.
ಮುಂದಿನ ಆದೇಶದವರೆಗೆ ಕೇಂದ್ರ ಸರ್ಕಾರದ ಎಲ್ಲ ಅಧಿಕಾರಿಗಳೂ ಏರ್ ಇಂಡಿಯಾದ ಟಿಕೆಟ್ಗಳನ್ನು ಹಣ ತೆತ್ತು ಖರೀದಿಸಬೇಕು ಎಂದು ಸೂಚನೆ ನೀಡಿದೆ.
ಏರ್ ಇಂಡಿಯಾ ಟಾಟಾ ಸನ್ಸ್ಗೆ ಮಾರಾಟವಾದ ನಂತರ ಕೇಂದ್ರ ಸರ್ಕಾರಕ್ಕೆ ಸಾಲದ ಮೇಲೆ ಸೇವೆ ಒದಸುವ ಪರಿಪಾಠವನ್ನು ಏರ್ ಇಂಡಿಯಾ ಕೈಬಿಟ್ಟಿದೆ. ಈ ಬೆಳವಣಿಗೆಯ ನಂತರ ಹಣಕಾಸು ಸಚಿವಾಲಯವು ಈ ನಿರ್ದೇಶನವನ್ನು ನೀಡಿದೆ.
ಏರ್ ಇಂಡಿಯಾ ಖರೀದಿಗೆ ಟಾಟಾ ಸನ್ಸ್ ಗ್ರೂಪ್ ಸಲ್ಲಿಸಿದ್ದ ಬಿಡ್ ಅಂತಿಮಗೊಂಡ ನಂತರ ಟಿಕೆಟ್ ಖರೀದಿಗೆ ನೀಡುತ್ತಿದ್ದ ಸಾಲ ಸೌಲಭ್ಯವನ್ನು ಏರ್ ಇಂಡಿಯಾ ನಿಲ್ಲಿಸಿದೆ. ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಏರ್ ಇಂಡಿಯಾದ ಬಾಕಿ ಚುಕ್ತ ಮಾಡುವಂತೆ ಮೆಮೊ ಮೂಲಕ ಸೂಚಿಸಿದೆ. .
ಏರ್ ಇಂಡಿಯಾವನ್ನು 18,000 ಕೋಟಿ ರೂಪಾಯಿಗೆ ಮಾರಾಟ ಮಾಡಲು ಟಾಟಾ ಸನ್ಸ್ನೊಂದಿಗೆ ಷೇರು ಖರೀದಿ ಒಪ್ಪಂದಕ್ಕೆ ಸರ್ಕಾರ ಸೋಮವಾರ (ಅ.25) ಸಹಿ ಹಾಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ