ಧಾರವಾಡ: ಡಿ.ಕೆ.ಶಿವಕುಮಾರ ಆಪ್ತನ ಮನೆ ಮೇಲೆ ಐಟಿ ದಾಳಿ

ಧಾರವಾಡ: ಕಾಂಗ್ರೆಸ್​ ನಾಯಕ ಡಿ.ಕೆ. ಶಿವಕುಮಾರ್ ಅವರ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಗುರುವಾರ) ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ. ಧಾರವಾಡದ ದಾಸನಕೊಪ್ಪ ಸರ್ಕಲ್‌ನಲ್ಲಿ ಗುತ್ತಿಗೆದಾರ ಯು.ಬಿ. ಶೆಟ್ಟಿ ಮನೆಯ ಮೇಲೆ ಐಟಿ ದಾಳಿ ನಡೆದಿದೆ.
ಗೋವಾದಿಂದ ಬಂದಿರುವ ಐವರು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ. ಯು. ಬಿ. ಶೆಟ್ಟಿ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದೀಗ ಅವರ ಸಹೋದರನ ಮನೆಗೆ ಕಾರಿನಲ್ಲಿ ಬಂದಿರುವ ಐದಾರು ಮಂದಿ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.
ಯು.ಬಿ.ಶೆಟ್ಟಿ ಅವರು ಬೆಂಗಳೂರು, ಧಾರವಾಡ, , ಬೈಂದೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು, ಹಣಕಾಸಿಗೆ ಸಂಬಂಧಪಟ್ಟಂತೆ ಐಟಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಕಾಂಗ್ರೆಸ್‌ ಈ ದಾಳಿಯನ್ನು ಖಂಡಿಸಿದ್ದು, ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಈ ದಾಳಿ ನಡೆಸಿದೆ ಎಂದು ಆರೋಪಿಸಿದೆ.

 

ನಿಮ್ಮ ಕಾಮೆಂಟ್ ಬರೆಯಿರಿ

advertisement