ಪುನೀತ್‌ ನಿಧನ : ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ಕನ್ನಡ ಚಿತ್ರರಂಗದ ಧ್ರುವ ತಾರೆ ಪುನೀತ್‌ ರಾಜ್‌ ಕುಮಾರ್‌ ಇಂದು ಹೃದಯಾಘಾತದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಖಾಸಗಿ ಶಾಲೆgಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದೆ.
ಪುನೀತ್‌ ರಾಜ್‌ ಕುಮಾರ್‌ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಶೋಕಾಚರಣೆಯ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ತಿಳಿಸಿದೆ.
ನಾಳೆ ನಡೆಯ ಬೇಕಿದ್ದ ಎಂಬಿಎ ಪರೀಕ್ಷೆಯನ್ನು ಸಿಟಿ ವಿಶ್ವವಿದ್ಯಾಲಯ ಮುಂದೂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿದ ಸಿಟಿ ವಿಶ್ವ ವಿದ್ಯಾಲಯ ಪುನೀತ್‌ ರಾಜ್‌ ಕುಮಾರ್‌ ಹೃದಯಾಘಾತದಿಂದ ಮೃತ ಪಟ್ಟಿರುವುದರಿಂದ ನಾಳೆ ನಡೆಯ ಬೇಕಿದ್ದ ಎಂಬಿಎ ಪರೀಕ್ಷೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ.

4 / 5. 1

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement