ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ್ ಮುತಾಲಿಕ್ ಕರೆ

ಹುಬ್ಬಳ್ಳಿ: ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ್ ಮುತಾಲಿಕ್ ಕರೆ…!
ಹುಬ್ಬಳ್ಳಿ: ಮುಂಬರಲಿರುವ ದೀಪಾವಳಿ ಹಬ್ಬವನ್ನು ಹಲಾಲ್ ಮುಕ್ತ ದೀಪಾವಳಿ ಆಚರಣೆ ಮಾಡಬೇಕೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ನಗರದಲ್ಲಿ ಇಂದು (ಶುಕ್ರವಾರ) ಹಿಂದೂ ಜನಜಾಗೃತಿ ಸಮಿತಿ ಹಾಗೂ ಶ್ರೀರಾಮ ಸೇನೆ ಸಹಯೋಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲನೆ ಮಾಡಲು ಸರ್ಕಾರದ ಎಫ್ ಎಸ್ಎಸ್ಎಐ ಸಂಸ್ಥೆ ಇದ್ದರೂ ಸಹಿತ ಹಲಾಲ್ ಇಂಡಿಯಾ, ಜಮೀಯತ್ ಉಮೇಮಾ-ಎ-ಹಿಂದ್ ನಂತರ ಇಸ್ಲಾಮಿಕ್ ಸಂಸ್ಥೆ ಸಸ್ಯಾಹಾರಿ ಆಹಾರಗಳು, ಸೌಂದರ್ಯ ವರ್ಧಕಗಳು, ಔಷಧಿಗಳು, ಆಸ್ಪತ್ರೆಗಳು, ಮನೆಗಳು ಸೇರಿದಂತೆ ಮುಂತಾದ ವಸ್ತುಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಸಾವಿರಾರು ರೂಪಾಯಿ ತೆಗೆದುಕೊಂಡು ಹಲಾಲ್ ಪ್ರಮಾಣಪತ್ರವನ್ನು ನೀಡುತ್ತಿವೆ. ಈ ಹಣಗಳನ್ನೇ ಇಸ್ಲಾಮಿಕ್ ಸಂಘಟನೆಗಳು ಬಳಸಿಕೊಂಡು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿವೆ.‌ ಕೂಡಲೇ ಸರ್ಕಾರ ಹಲಾಲ್ ಪ್ರಮಾಣೀಕರಣ ಪದ್ದತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ಎಫ್ ಎಸ್ ಎಸ್ ಎಐ ಇರುವಾಗ ಹಲಾಲ್ ಪ್ರಮಾಣಪತ್ರ ನೀಡುವ ಇದರ ಅವಶ್ಯಕತೆ ಏನಿದೆ? ಈ ಹಲಾಲ್ ಪ್ರಮಾಣ ಪ್ರಮಾಣಪತ್ರಕ್ಕೆ ಮೊದಲನೇ ಸಲ 21500 ರೂ ಮತ್ತು ಪ್ರತಿವರ್ಷ ನವೀಕರಣಕ್ಕೆ 15.000 ರೂ ಶುಲ್ಕವನ್ನು ತೆಗೆದುಕೊಳ್ಳಲಾಗುತ್ತದೆ. ಈ ವರ್ಷದ ದೀಪಾವಳಿಗೆ ವಸ್ತುಗಳನ್ನು ಖರೀದಿಸುವಾಗ ಗ್ರಾಹಕರ ಹಕ್ಕು ಎಂದು ಹಲಾಲ್ ಪ್ರಮಾಣಿಕೃತ ಉತ್ಪನ್ನಗಳು, ಮೆಕ್ ಡೊನಾಲ್ಡ್ ಮತ್ತು ಡೊಮಿನೋಸ್ ಆಹಾರವನ್ನು ಬಹಿಷ್ಕರಿಸಬೇಕು. ಮತ್ತು ಹಲಾಲ್ ಮುಕ್ತ ದೀಪಾವಳಿ ಅಭಿಯಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

2 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement