ಪುನೀತರಾಜಕುಮಾರ ನಿಧನದ ಶಾಕ್‌: ಬೆಳಗಾವಿಯಲ್ಲಿ ಇಬ್ಬರು ಅಭಿಮಾನಿಗಳ ಸಾವು

ಬೆಳಗಾವಿ :ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿ ಕೇಳಿ ಬೆಳಗಾವಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
ಅಥಣಿಯಲ್ಲಿ ಇಪ್ಪತ್ತಾರು ವರ್ಷದ ರಾಹುಲ್ ಗಾಡಿವಡ್ಡರ್ ಅವರು ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಆತ್ಮಹತ್ಯೆ ಶರಣಾಗಿದ್ದು, ಪುನೀತ್‌ ನಿಧನದ ಶಾಕಿನಿಂದ ಹೀಗೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ..
ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿ ಪರಶುರಾಮ್ ಹನುಮಂತ್ ದೇಮಣ್ಣವರ (33)ಶುಕ್ರವಾರ ಸಂಜೆಯಿಂದ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಪುನೀತ್ ರಾಜ್ ಕುಮಾರ್ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾಗಿ ಹೃದಯಾಘಾತಕ್ಕೊಳಗಾಗಿದ್ದಾರೆ. ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನಿಮ್ಮ ಕಾಮೆಂಟ್ ಬರೆಯಿರಿ

advertisement