ಕರ್ನಾಟಕದ 11 ಜಿಲ್ಲೆಗಳಲ್ಲಿ ಶೂನ್ಯ ಕೊರೊನಾ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 292 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 11 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 245 ಮಂದಿ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ‌
ರಾಜ್ಯದಲ್ಲಿ‌ ಇಂದು ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ,ದಾರವಾಡ, ಗದಗ, ಕೊಪ್ಪಳ, ರಾಯಚೂರು ,ರಾಮನಗರ, ವಿಜಯಪುರ ಮತ್ತು ಯಾದಗಿರಿ ಸೇರಿ ಹನ್ನೊಂದು ಜಿಲ್ಲೆಗಳಲ್ಲಿ ಯಾವುದೇ ಸೋಂಕು ಪ್ರಕರಣ ದೃಢಪಟ್ಟಿಲ್ಲ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,88,333 ಕ್ಕೆ ಏರಿಕೆಯಾಗಿದೆ. ಒಟ್ಟು 29,41,578 ಕ್ಕೆ ಗುಣಮುಖರಾಘಿ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 38,082ಕ್ಕೆ ಏರಿದೆ. ರಾಜ್ಯದಲ್ಲಿ ಸದ್ಯ 8,644 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣ ಭಾನುವಾಋ ಇಳಿಕೆಯಾಗಿದೆ. 137 ಮಂದಿಗೆ ಕಾಣಿಸಿಕೊಂಡಿದ್ದು, 204 ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸೋಂಕಿನ ಮಾಹಿತಿ…
ಬಾಗಲಕೋಟೆ- 0, ಬಳ್ಳಾರಿ –0, ಬೆಳಗಾವಿ – 6, ಬೆಂಗಳೂರು ಗ್ರಾಮಾಂತರ- 3, ಬೆಂಗಳೂರು ನಗರ. – 137, ಬೀದರ್ -0, ಚಾಮರಾಜನಗರ- 0, ಚಿಕ್ಕಬಳ್ಳಾಪುರ- 2, ಚಿಕ್ಕಮಗಳೂರು- 3, ಚಿತ್ರದುರ್ಗ- 3, ದಕ್ಷಿಣ ಕನ್ನಡ – 24, ದಾವಣಗೆರೆ- 2, ಧಾರವಾಡ- 0, ಗದಗ- 0, ಹಾಸನ- 26,
ಹಾವೇರಿ- 1, ಕಲಬುರಗಿ- 3, ಕೊಡಗು- 11, ಕೋಲಾರ- 2, ಕೊಪ್ಪಳ- 0, ಮಂಡ್ಯ- 8, ಮೈಸೂರು- 33, ರಾಯಚೂರು- 0, ರಾಮನಗರ – 0, ಶಿವಮೊಗ್ಗ- 3, ತುಮಕೂರು- 17, ಉಡುಪಿ- 2, ಉತ್ತರ ಕನ್ನಡ- 6, ವಿಜಯಪುರ – 0, ಯಾದಗಿರಿ- 0

ಪ್ರಮುಖ ಸುದ್ದಿ :-   ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement