ಪ್ರಭಾಕರ್ ಸೈಲ್ ಆರೋಪ ಆಧಾರ ರಹಿತ ಎಂದು ಕರೆದ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ

ಮುಂಬೈ: ಮುಂಬೈ ಡ್ರಗ್ ಪಾರ್ಟಿ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರು ಪ್ರಭಾಕರ್ ಸೈಲ್ ಮಾಡಿರುವ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಸೈಲ್ ಮಾಡಿರುವ ಆರೋಪಗಳು “ಆಧಾರರಹಿತ” ಎಂದು ಎನ್‌ಸಿಬಿ ಅಧಿಕಾರಿ ಹೇಳಿದ್ದಾರೆ ಮತ್ತು ತಮ್ಮ ವಿರುದ್ಧ ಕಪೋಲಕಲ್ಪಿತ ಕಥೆಯನ್ನು ಕಟ್ಟಲಾಗಿದೆ ಎಂದು ಹೇಳಿದ್ದಾರೆ.
ವರದಿಯ ಪ್ರಕಾರ, ಈ ಆರೋಪಗಳು ತನಿಖೆಯ ದಿಕ್ಕನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನವಾಗಿದೆ ಎಂದು ವಾಂಖೇಡೆ ಹೇಳಿದ್ದಾರೆ. ಕ್ರೂಸ್ ಪಾರ್ಟಿ ದಾಳಿಯನ್ನು ಕಾನೂನುಬದ್ಧವಾಗಿ ನಡೆಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿರುವವರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಹೇಳಿದ ಅವರು, “ಸಮೀರ್ ವಾಂಖೇಡೆ ಮತ್ತು ಕುಟುಂಬ ಸದಸ್ಯರ ಸುರಕ್ಷತೆ ಅಪಾಯದಲ್ಲಿದೆ. ಕೆಲವು ದಿನಗಳ ಹಿಂದೆ, ಮೂರು ಜನರನ್ನು ಮನೆಯಲ್ಲಿ ರೆಸಿಕ್ನಲ್ಲಿ ನೋಡಿದ್ದೇವೆ. ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ನೀಡಲಿದ್ದು, ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ ಭಾನುವಾರ ಮುಂಜಾನೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಅರ್ಬಾಜ್ ಮರ್ಚೆಂಟ್ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಹೊರಬಂದಿದ್ದಾರೆ. ಕ್ರೂಸ್ ಪಾರ್ಟಿ ದಾಳಿಯ ನಂತರ ಬಂಧನಕ್ಕೊಳಗಾದ ಮತ್ತು ನಂತರ ಬಂಧಿಸಲ್ಪಟ್ಟ ಎಂಟು ವ್ಯಕ್ತಿಗಳಲ್ಲಿ ಮರ್ಚೆಂಟ್ ಸಹ ಒಬ್ಬರು.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement