ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ಒತ್ತಾಯಿಸಿ ಸಿಎಂಗೆ ಹೊರಟ್ಟಿ ಪತ್ರ

ಹುಬ್ಬಳ್ಳಿ: ನವಂಬರ್‌ ಕೊನೆಯಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಐಇ ಅವರಿಗೆ ಪತ್ರ ಬರೆದಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ 25 ಸದಸ್ಯರುಗಳು 2022 ರ ಜನೆವರಿ 5 ರಂದು ನಿವೃತ್ತಿ ಹೊಂದಲಿದ್ದಾರೆ. … Continued

ಅಫ್ಘಾನ್​ ಹುಡುಗಿ ಕಳುಹಿಸಿದ ಕಾಬೂಲ್​ ನದಿ ನೀರಿನಿಂದ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಜಲಾಭಿಷೇಕ ಮಾಡಿದ ಸಿಎಂ ಯೋಗಿ

ಅಯೋಧ್ಯೆ: ರಾಮಜನ್ಮಭೂಮಿಗಾಗಿ ಅಫ್ಘಾನಿಸ್ತಾನದ ಹುಡುಗಿಯೊಬ್ಬಳು ಕಳುಹಿಸಿದ್ದ ಕಾಬೂಲ್​ ನದಿಯ ನೀರಿನಿಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಶ್ರೀ ರಾಮಜನ್ಮಭೂಮಿಯಲ್ಲಿ ಜಲಾಭಿಷೇಕ ಮತ್ತು ಪೂಜೆ ನೆರವೇರಿಸಿದ್ದಾರೆ. ಇಂಥದ್ದೊಂದು ವಿಶೇಷ ಘಟನೆ ಇಂದು (ಭಾನುವಾರ) ಅಯೋಧ್ಯೆಯ ಶ್ರೀರಾಮಮಂದಿರ ನಿರ್ಮಾಣ ಸ್ಥಳದಲ್ಲಿ ನಡೆದಿದೆ. ಬಾಲಕಿ ಕಳುಹಿಸಿದ್ದ ಕಾಬೂಲ್​ ನದಿ ನೀರನ್ನು ಗಂಗಾಜಲದೊಂದಿಗೆ ಮಿಶ್ರಣ ಮಾಡಿ, ಮಂದಿರ ನಿರ್ಮಾಣದ ಜಾಗಕ್ಕೆ … Continued

66 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ವಿವರ ಇಲ್ಲಿದೆ

ಬೆಂಗಳೂರು :ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಸಾಧಕರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಬಿಡುಗಡೆ ಮಾಡಿದ್ದಾರೆ. 66 ಸಾಧಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ. ಸಂಘ-ಸಂಸ್ಥೆ ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ ಗದಗ ಕರ್ನಾಟಕ ಹಿಮೋಫೀಲಿಯಾ ಸೊಸೈಟಿ ದಾವಣಗೆರೆ ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ … Continued

ಸಾಯುವ ಕೆಲವೇ ತಾಸಿನ ಮೊದಲು ಅಜ್ಜಿ ನನಗೆ ಹೇಳಿದ್ದಳು, ಅಳಬೇಡ…: ಇಂದಿರಾ ಗಾಂಧಿ ಸಾವಿನ ಭಾವನಾನ್ಮಕ ವಿಡಿಯೊ ಹಂಚಿಕೊಂಡ ರಾಹುಲ್

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಭಾವನಾತ್ಮಕ ವಿಡಿಯೊ ಹಂಚಿಕೊಳ್ಳುವ ಮೂಲಕ 1984ರಲ್ಲಿ ಇದೇ ದಿನ ದೆಹಲಿಯಲ್ಲಿ ಹತ್ಯೆಗೀಡಾದ ತಮ್ಮ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಸ್ಮರಿಸಿಕೊಂಡಿದ್ದಾರೆ. ಮೂರು ನಿಮಿಷಗಳ ವೀಡಿಯೊದಲ್ಲಿ ರಾಹುಲ್‌ ಗಾಂಧಿ (ಆಗ ಅವರಿಗೆ ಕೇವಲ 14 ವರ್ಷ) ಅಂತ್ಯಕ್ರಿಯೆಯಲ್ಲಿ ಅಳುತ್ತಿರುವ ಹೃದಯ ಮಿಡಿಯುವ ದೃಶ್ಯಗಳಿವೆ – … Continued

“ಯುವರತ್ನ” ಪುನೀತ್ ರಾಜ್‌ಕುಮಾರ್‌ಗೆ ಅಮುಲ್‌ ವಿಶೇಷ ಗೌರವ

ನವದೆಹಲಿ: ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಶುಕ್ರವಾರ ನಿಧನರಾದಾಗ ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಹಿತೈಷಿಗಳಿಗೆ ಆಘಾತವಾಗಿದೆ. ದುರಂತ ನಷ್ಟದ ಕುರಿತು ಸಂದೇಶಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಎಲ್ಲಾ ಭಾಗಗಳಿಂದ ತುಂಬಿ ತುಳುಕುತ್ತಿವೆ. ಆದರೆ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲು ಅವರ ಸಮೃದ್ಧ ಕೆಲಸವನ್ನು ನೆನಪಿಸಿಕೊಳ್ಳುವುದಕ್ಕಿಂತ ಉತ್ತಮವಾದ ಮಾರ್ಗವಿದೆಯೇ? ಅಭಿಮಾನಿಗಳು ಮತ್ತು ಸಿನಿಮಾ ಪ್ರೇಮಿಗಳು ಪುನೀತ್ … Continued

ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್‌ಗೆ ಕೊರೊನಾ ಸೋಂಕು

ನವದೆಹಲಿ: ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್ ಅವರಿಗೆ ಕೋವಿಡ್ -19 ಸೋಂಕು ತಗುಲಿದೆ. 47 ವರ್ಷದ ನಟಿ, ಭಾನುವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತಾನು ಕೊರೊನಾ ವೈರಸ್‌ಗೆ ತುತ್ತಾಗಿರುವುದಾಗಿ ಹೇಳಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕವಾಗಿರುವುವುದಾಗಿ ತಿಳಿಸಿರುವ ಅವರು, “ನಾನು ಕೋವಿಡ್-19 ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ನಾನು ಚೆನ್ನಾಗಿದ್ದೇನೆ ಮತ್ತು ಮನೆಯ ಹೋಮ್‌ ಕ್ವಾರಂಟೈನ್‌ನಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ, ಕಳೆದ ಕೆಲವು … Continued

ಪುನೀತ್ ಕಣ್ಣುಗಳು ಇಬ್ಬರಿಗೆ ಅಳವಡಿಕೆ: ವರದಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತನ್ನ ಎರಡೂ ಕಣ್ಣುಗಳನ್ನು ಅವರು ದಾನ ಮಾಡಿದ್ದು, ಅವರ ಕಣ್ಣುಗಳನ್ನು ಈಗ ಇಬ್ಬರಿಗೆ ಅಳವಡಿಸಲಾಗಿದೆ ಎಂದು ವರದಿಯಾಗಿದೆ. ಪುನೀತ್ ಅವರ ಕಣ್ಣುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಇಬ್ಬರಿಗೆ ಅಳವಡಿಸಲಾಗಿದೆ. ಶನಿವಾರ ನಾರಾಯಣ ನೇತ್ರಾಲಯದ ವೈದ್ಯರುಪುನೀತ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಮತ್ತೊಂದು ಕಣ್ಣನ್ನು ಮತ್ತೊಬ್ಬರಿಗೆ … Continued

ಭಾರತದ ಅಗ್ನಿ-5 ಕ್ಷಿಪಣಿ ಪರೀಕ್ಷೆಯಿಂದ ಬೆಚ್ಚಿಬಿದ್ದ ಚೀನಾ..: ಉಡಾವಣೆ ದೇಶೀಯ ಸಮಸ್ಯೆಗಳಿಂದ ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ಎಂದ ಚೀನಾ ಮುಖವಾಣಿ

ನವದೆಹಲಿ: ಮೇಲ್ಮೈಯಿಂದ ಮೇಲ್ಮೈಗೆ ( surface-to-surface ) ಹಾರುವ ಅಗ್ನಿ-5 ಕ್ಷಿಪಣಿ ಉಡಾವಣೆಯಿಂದ ಬೆಚ್ಚಿಬಿದ್ದಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ ಮುಖವಾಣಿ ಇದನ್ನು ತನ್ನ ದೇಶೀಯ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಭಾರತದ ಪ್ರಯತ್ನ ಎಂದು ಬಣ್ಣಿಸಿದೆ. ಸಿಸಿಪಿ (CCP) ಮುಖವಾಣಿ ಗ್ಲೋಬಲ್ ಟೈಮ್ಸ್ ಸಂಪಾದಕೀಯದಲ್ಲಿ, ಚೀನಾ ವಿರುದ್ಧ ಅಗ್ನಿ-5 ಪರೀಕ್ಷೆಯಲ್ಲಿ ಭಾರತೀಯ ಮಾಧ್ಯಮದ ಪ್ರಚಾರವು ದೇಶೀಯ … Continued

ನನ್ನ ಮಗನನ್ನೇ ಕಳೆದುಕೊಂಡೆ : ಪುನೀತ್‌ ನಿಧನಕ್ಕೆ ಶಿವಣ್ಣ ಕಂಬನಿ

ಬೆಂಗಳೂರು: ಅಪ್ಪು ಇಲ್ಲ ಎಂದು ಹೇಳಲು ಮನಸ್ಸು ಒಪ್ಪುತ್ತಿಲ್ಲ. ಇಲ್ಲೇ ಎಲ್ಲೋ ಹೋಗಿರಬೇಕು ಬರ್ತಾನೆ ಎಂದು ಅನಿಸ್ತದೆ. ನಟ ಪುನೀತ್ ರಾಜಕುಮಾರ್ ನಿಧನದಿಂದ ಆಘಾತಕ್ಕೆ ಒಳಗಾಗಿ ಮೌನವಾಗಿದ್ದು ಅಂತ್ಯಕ್ರಿಯೆ ಬಳಿಕ ಹಿರಿಯ ನಟ ಹಾಗೂ ಸಹೋದರ ಶಿವರಾಜ್ ಕುಮಾರ್ ಹೇಳಿದ್ದು ಹೀಗೆ. ಪುನೀತ್ ಕಳೆದುಕೊಂಡಿರುವುದು ಮಗನನ್ನೇ ಕಳೆದುಕೊಂಡಷ್ಟು ನೋವಾಗಿದೆ. ನನಗಿಂತ ಹದಿಮೂರು ವರ್ಷ ಚಿಕ್ಕವನು. ಇಡೀ … Continued

ಪಾಟ್ನಾ ಮೃಗಾಲಯದಲ್ಲಿ ತಂಪಾದ ವಾತಾವರಣ ಆನಂದಿಸುತ್ತಿರುವ ಜೋಡಿ ಸರ್ಪಗಳು… ವೀಕ್ಷಿಸಿ

ಬಿಹಾರದ ಪಾಟ್ನಾ ಮೃಗಾಲಯದಲ್ಲಿ ಎರಡು ಹಾವುಗಳು ಆಹ್ಲಾದಕರ ವಾತಾವರಣದಲ್ಲಿ ಆಟವಾಡುವ ಮತ್ತು ಕೂಲಾಗಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್‌ ಆಗಿದೆ. ಎರಡು ನಾಗರ ಹಾವುಗಳ ವಿಡಿಯೋವನ್ನು ಬಿಹಾರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಸಿಂಗ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ನಂತರ ವೈರಲ್ ಆಗಿದೆ. A pair of … Continued