ಇದೆಂಥ ಶಿಕ್ಷೆ.. ಬಾಲ್ಕನಿಯಲ್ಲಿ ಆರು ವರ್ಷದ ಮಗುವನ್ನು ತಲೆಕೆಳಗಾಗಿ ನೇತು ಹಾಕಿದ ಶಾಲೆ ಪ್ರಾಂಶುಪಾಲ..! ವೀಕ್ಷಿಸಿ

ಲಕ್ನೋ: ಗೋಲ್ ಗಪ್ಪಾಸ್ ತಿಂದಿದ್ದಕ್ಕಾಗಿ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರು ಆರು ವರ್ಷದ ವಿದ್ಯಾರ್ಥಿಯನ್ನು ಕಟ್ಟಡದ ಮೊದಲ ಮಹಡಿಯಿಂದ ತಲೆಕೆಳಗಾಗಿ ನೇತಾಡಿಸಿ ಶೀಕ್ಷೆ ನೀಡಿದ ವಿಡಿಯೋ ವೈರಲ್‌ ಆದ ನಂತರ ಅವರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುರುವಾರ ಸಂಭವಿಸಿದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ … Continued

ನಟ ಪುನೀತ್ ರಾಜ್‌ಕುಮಾರ್‌ಗೆ ಅಂತಿಮ ನಮನ ಸಲ್ಲಿಸಲು ಕಂಠೀರವ ಕ್ರೀಡಾಂಗಣಕ್ಕೆ ಹರಿದುಬಂದ ಜನಸಾಗರ

ಬೆಂಗಳೂರು: ಶುಕ್ರವಾರ ಸಂಜೆ ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂನಲ್ಲಿ ಸಾವಿರಾರು ಅಭಿಮಾನಿಗಳು ಹೃದಯಾಘಾತದಿಂದ 46 ನೇ ವಯಸ್ಸಿನಲ್ಲಿ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಸಾರ್ವಜನಿಕರ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ಕ್ರೀಡಾಂಗಣದಲ್ಲಿ ಇರಿಸಲಾಗಿದೆ. ಕಂಠೀರವ ಸ್ಟುಡಿಯೋ(Kanteerava Studio)ದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ರಾಜ್​ಕುಮಾರ್ ಅವರ ಹಠಾತ್​ ನಿಧನ … Continued

ಇಟಲಿಯಲ್ಲಿ ಪ್ರಧಾನಿ ಮೋದಿಗೆ ಸಂಸ್ಕೃತ ಮಂತ್ರ ಪಠಿಸಿ ಸ್ವಾಗತ

ನವದೆಹಲಿ: ಜಿ-20 ಶೃಂಗಸಭೆ ಮತ್ತು 26ನೇ ಕಾನ್ಫರೆನ್ಸ್ ಆಫ್ ಪಾರ್ಟೀಸ್‌ನಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಟಲಿಯನ್ನು ತಲುಪಿದ್ದಾರೆ. ಅಲ್ಲಿ ಅವರಿಗೆ ಸಂಸ್ಕೃತ ಮಂತ್ರಗಳನ್ನು ಪಠಿಸುವ ಮೂಲಕ ಅವರ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ. ವಿಶೇಷ ವಿಮಾನದ ಮೂಲಕ ಇಟಲಿಗೆ ತೆರಳಿರುವ ಪ್ರಧಾನಿ ಮೋದಿ, ರೋಮ್‌ನಲ್ಲಿ ನಡೆಯಲಿರುವ 16ನೇ ಜಿ-20 ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಟಲಿ … Continued

ಮೋದಿ ಸರ್‌ನೇಮ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಪ್ರಕರಣ: ರಾಹುಲ್‌ ಕೋರ್ಟ್‌ಗೆ ಹಾಜರ್‌

ನವದೆಹಲಿ: 2019ರ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಮೋದಿ ಸರ್​ನೇಮ್​ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸೂರತ್​ನ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾದರು. ರಾಹುಲ್​ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಇವರ ವಿರುದ್ಧ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಮಾನನಷ್ಟ ಪ್ರಕರಣ ದಾಖಲು ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಸೂರತ್​ನ ಮ್ಯಾಜಿಸ್ಟ್ರೇಟ್ … Continued

ಪುನೀತ್‌ ನಿಧನ : ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ಕನ್ನಡ ಚಿತ್ರರಂಗದ ಧ್ರುವ ತಾರೆ ಪುನೀತ್‌ ರಾಜ್‌ ಕುಮಾರ್‌ ಇಂದು ಹೃದಯಾಘಾತದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಖಾಸಗಿ ಶಾಲೆgಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದೆ. ಪುನೀತ್‌ ರಾಜ್‌ ಕುಮಾರ್‌ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಶೋಕಾಚರಣೆಯ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ … Continued

ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಜಾಮೀನು ಸಿಕ್ಕರೂ ಇಂದು ಬಿಡುಗಡೆ ಇಲ್ಲ

ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್​ ಖಾನ್​ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ ಶುಕ್ರವಾರ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ಆರ್ಯನ್ ಖಾನ್ ಮತ್ತೊಂದು ರಾತ್ರಿ ಜೈಲಿನಲ್ಲಿಯೇ ಕಳೆಯಬೇಕಾಗಿದೆ. ಆರ್ಥರ್ ರೋಡ್ ಜೈಲಿನ ಅಧಿಕಾರಿಗಳ … Continued

ಕಂಠೀರವ ಸ್ಟುಡಿಯೋದಲ್ಲಿ ಅಪ್ಪ-ಅಮ್ಮನ ಸಮಾಧಿ ಪಕ್ಕದಲ್ಲೇ ಭಾನುವಾರ ಪುನೀತ್ ರಾಜ​ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್​ಕುಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್ ಅವರ ಸಮಾಧಿಯ ಪಕ್ಕದಲ್ಲೇ ಭಾನುವಾರ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಪುನೀತ್ ರಾಜ್​ಕುಮಾರ್ ಮಗಳು ಅಮೆರಿಕದಿಂದ ಆಗಮಿಸಬೇಕಿರುವಕಾರಣ ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್​ಕುಮಾರ್​ಗೆ ಸಕಲ ಸರ್ಕಾರಿ​ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರದಿಂದ ಅಧಿಸೂಚನೆ … Continued

ಬದುಕಿನ ಪಯಣ ಮುಗಿಸಿದ ಎಲ್ಲರ ಪ್ರೀತಿಯ ಅಪ್ಪು.. ಬಾಲದಲ್ಲೇ ನಟನೆಗೆ ರಾಷ್ಟ್ರ ಪ್ರಶಸ್ತಿ..ಸಿನೆಮಾ ಸಂಭಾವನೆ ಒಂದು ಭಾಗ ಅನಾಥಾಶ್ರಮ, ಗೋಶಾಲೆಗಳಿಗೆ

ಬೆಂಗಳೂರು: ಸ್ಯಾಂಡಲ್​ವುಡ್​ನ ಪವರ್​ ಸ್ಟಾರ್ ಎಂದು ಕರೆಸಿಕೊಳ್ಳುವ ನಟ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳಿಗೆ ಪ್ರೀತಿಯ ಅಪ್ಪು. 46 ವರ್ಷದ ನಟನಿಗೆ ಇಂದು ಬೆಳಿಗ್ಗೆ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಬೆಳಿಗ್ಗೆ 11:30ಕ್ಕೆ ಪುನೀತ್​ ಅವರಿಗೆ ಹೃದಯಾಘಾತವಾಗಿದ್ದು, ಮೊದಲು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಇಸಿಜಿ ಮಾಡಿದ ನಂತರ ಅವರನ್ನು ತಕ್ಷಣವೇ … Continued

ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ್ ಮುತಾಲಿಕ್ ಕರೆ

ಹುಬ್ಬಳ್ಳಿ: ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ್ ಮುತಾಲಿಕ್ ಕರೆ…! ಹುಬ್ಬಳ್ಳಿ: ಮುಂಬರಲಿರುವ ದೀಪಾವಳಿ ಹಬ್ಬವನ್ನು ಹಲಾಲ್ ಮುಕ್ತ ದೀಪಾವಳಿ ಆಚರಣೆ ಮಾಡಬೇಕೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಇಂದು (ಶುಕ್ರವಾರ) ಹಿಂದೂ ಜನಜಾಗೃತಿ ಸಮಿತಿ ಹಾಗೂ ಶ್ರೀರಾಮ ಸೇನೆ ಸಹಯೋಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಸುರಕ್ಷತೆ … Continued

ಆಗುಂಬೆ ಘಾಟಿನಲ್ಲಿ ಉರುಳಿದ ಲಾರಿ: ನಾಲ್ವರ ಸಾವು, ಐವರಿಗೆ ಗಂಭೀರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ. ಲಾರಿ ಕಂದಕಕ್ಕೆ ಉರುಳಿದ್ದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಗುಂಬೆ ಘಾಟಿಯಲ್ಲಿ ತಿರುವಿನಲ್ಲಿ ಈ ಅಫಘಾತ ಸಂಭವಿಸಿದೆ. ಲಾರಿ ಕಾರವಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, … Continued