ಹಾನಗಲ್, ಸಿಂದಗಿ ಉಪಚುನಾವಣೆ : ನಾಳೆ ಮತ ಎಣಿಕೆ, ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕದ ಹಾನಗಲ್‌ ಹಾಗೂ ಸಿಂದಗಿ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯು ನಾಳೆ (ನವೆಂಬರ್ 2) ನಡೆಯಲಿದೆ. ಮತ ಎಣಿಕೆಯ ಬಳಿಕ ಚುನಾವಣಾ ಆಯೋಗ ಕೆಲ ಮಾರ್ಗಸೂಚಿಗಳನ್ನು ವಿಧಿಸಿದ್ದು, ವಿಜಯೋತ್ಸವವನ್ನು ಆಚರಿಸಲು ಅವಕಾಶ ಇಲ್ಲ. ವಿಜೇತ ಅಭ್ಯರ್ಥಿ ಚುನಾವಣಾ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಲು ಸಹ ಷರತ್ತು‌ ವಿಧಿಸಲಾಗಿದೆ. ವಿಜೇತ ಅಭ್ಯರ್ಥಿಯೊಂದಿಗೆ ಪ್ರಮಾಣಪತ್ರ … Continued

ಅಕ್ಟೋಬರ್‌ನಲ್ಲಿ 1.30 ಲಕ್ಷ ಕೋಟಿ ರೂ.ಜಿಎಸ್‌ಟಿ ಸಂಗ್ರಹ: ಜಿಎಸ್ ಟಿ ಜಾರಿಗೆ ಬಂದ ನಂತರ ಇದು ಎರಡನೇ ಅತಿ ಹೆಚ್ಚು ತೆರಿಗೆ ಸಂಗ್ರಹ

ನವದೆಹಲಿ: ಕೋವಿಡ್ ನಂತರ ಸತತ ನಾಲ್ಕನೇ ತಿಂಗಳು ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ 1 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಾಗಿದೆ. ಅಕ್ಟೋಬರ್ ತಿಂಗಳಲ್ಲಿ 1.30 ಲಕ್ಷ ಕೋಟಿ ರೂ.ಗಳಷ್ಟು ಜಿಎಸ್‌ಟಿ ಸಂಗ್ರಹವಾಗಿದೆ. ಇದು ಜುಲೈ 2017 ರಲ್ಲಿ ಜಿಎಸ್ ಟಿ ಜಾರಿಗೆ ಬಂದ ನಂತರ ಸಂಗ್ರಹವಾದ ಎರಡನೇ ಅತಿ ಹೆಚ್ಚು ತೆರಿಗೆ … Continued

ಜನರ ಮನೆ ಬಾಗಿಲಿಗೆ ಸರ್ಕಾರದ ಆಡಳಿತ: ಜನ ಸ್ಪಂದನ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ, ೫೬ ಸೇವೆಗಳ ಸೇರ್ಪಡೆ

ಬೆಂಗಳೂರು: ಆಡಳಿತವನ್ನು ಜನರ ಮನೆಯ ಬಾಗಿಲಿಗೇ ತಲುಪಿಸುವ ಜನ ಸೇವಕ ಮತ್ತು ಜನ ಸ್ಪಂದನ ಯೋಜನೆ ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿದ್ದು, ರಾಜ್ಯದ ಜನತೆ ಸರ್ಕಾರದ ಸೇವೆಗಳನ್ನು ಮನೆ ಬಾಗಿಲಲ್ಲೇ ಪಡೆದುಕೊಳ್ಳಬಹುದಾಗಿದೆ. ವಿಧಾನಸೌಧದಲ್ಲಿ ಕನ್ನಡ ರಾಜ್ಯೋತ್ಸವದ ದಿನ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನ ಸೇವಕ ಮತ್ತು ಜನ ಸ್ಪಂದನ ಯೋಜನೆಗೆ ಚಾಲನೆ ನೀದರು. ನಾಗರಿಕರು … Continued

ಪುನೀತ್​ ರಾಜಕುಮಾರ 2 ಕಣ್ಣುಗಳು 4 ಜನರಿಗೆ ಅವಳವಡಿಕೆ: ಹೇಗೆಂದು ವೈದ್ಯರಿಂದ ಮಾಹಿತಿ

ಬೆಂಗಳೂರು: ಬದುಕಿದ್ದಾಗ ಅನೇಕರಿಗೆ ಸಹಾಯ ಹಸ್ತ ಚಾಚಿದ್ದ ಪುನೀತ್​ ರಾಜ್​ಕುಮಾರ್​ ಸಾವಿನ ನಂತರವೂ ಅವರು ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ಅವರ ಎರಡು ಕಣ್ಣುಗಳನ್ನು ನಾಲ್ಕು ಜನರಿಗೆ ಅಳವಡಿಸಲಾಗಿದೆ. ನಾರಾಯಣ ನೇತ್ರಾಲಯದ ಡಾ. ಭುಜಂಗ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆ ಡಾ. ರಾಜ್​ಕುಮಾರ್ ಕೂಡ ಕಣ್ಣುಗಳನ್ನು ದಾನ ಮಾಡಿದ್ದರು. ಅವರ … Continued

ಕಾರು ಅಪಘಾತ:ಮಿಸ್ ಕೇರಳ 2019 ಆನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಶಾಜನ್ ಸಾವು

ತಿರುವನಂತಪುರಂ: ಕೇರಳದಲ್ಲಿ ನಿನ್ನೆ (ಭಾನುವಾರ) ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಖ್ಯಾತ ರೂಪದರ್ಶಿಯರು ಸಾವಿಗೀಡಾಗಿದ್ದಾರೆ. ಮಿಸ್ ಕೇರಳ 2019 ಪ್ರಶಸ್ತಿ ವಿಜೇತೆ ಆನ್ಸಿ ಕಬೀರ್ ಮತ್ತು ರನ್ನರ್ ಅಪ್ ಅಂಜನಾ ಶಾಜನ್ ಭಾನುವಾರು ಮಧ್ಯರಾತ್ರಿ ವೈಟ್ಟಿಲಾ-ಪಾಲಾರಿವಟ್ಟಂ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಕ್ಕರಪರಂಬುವಿನಲ್ಲಿ ಹಾಲಿಡೇ ಇನ್ ಬಳಿ … Continued

ಅಸ್ಸಾಂ: ಬುರ್ಖಾ ಧರಿಸದೆ ಜೀನ್ಸ್ ಧರಿಸಿ ಅಂಗಡಿಗೆ ಬಂದಿದ್ದಕ್ಕೆ ಮುಸ್ಲಿಂ ಯುವತಿಯನ್ನು ಅವಾಚ್ಯವಾಗಿ ನಿಂದಿಸಿ ಹೊರಹಾಕಿದ ಅಂಗಡಿ ಮಾಲೀಕ…!

ಮುಸ್ಲಿಂ ಯುವತಿಯೊಬ್ಬಳು ತಮ್ಮ ಅಂಗಡಿಗೆ ಬುರ್ಖಾದ ಬದಲು ಜೀನ್ಸ್ ಧರಿಸಿ ಬಂದಿದ್ದಕ್ಕೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಂದೆ ಮತ್ತು ಆತನ ಮಗನನ್ನು ಅಸ್ಸಾಂನ ಬಿಶ್ವನಾಥ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ತಂದೆ-ಮಗ ಇಬ್ಬರ ಮಾಲೀಕತ್ವದ ಅಂಗಡಿಯಲ್ಲಿ ಇಯರ್ ಫೋನ್ ಖರೀದಿಸಲು ಈ ಯುವತಿ ತೆರಳಿದ್ದಳು. ಆಕೆ ಬುರ್ಖಾ ಬದಲು ಜೀನ್ಸ್‌ ಧರಿಸಿದ್ದಕ್ಕೆ ಸೇವೆಯನ್ನು ನಿರಾಕರಿಸಿದ್ದಲ್ಲದೆ, ಇಬ್ಬರೂ ನಿಂದನೆ … Continued

ನಾಯಿಗೆ ಹಿಂಸೆ ನೀಡುತ್ತಿದ ವ್ಯಕ್ತಿ ಮೇಲೆ ದಾಳಿ ಮಾಡಿದ ಆಕಳು..ಅದರ ಕೋಪ ಹೇಗಿತ್ತೆಂದರೆ..!: ದೃಶ್ಯ ವಿಡಿಯೊದಲ್ಲಿ ಸೆರೆ

ಪ್ರಾಣಿಗಳು ಹೇಗೆ ಪ್ರೀತಿಗೆ ಸ್ಪಂದಿಸುತ್ತವೆಯೇ ಅದೇ ರೀತಿ ಹಿಂಸೆ ಮಾಡಿದರೆ ಅದನ್ನು ಸಹಿಸಿಕೊಳ್ಳುವುದಿಲ್ಲ, ತಮಗಷ್ಟೇ ಅಲ್ಲ, ಮತ್ತೊಂದು ಪ್ರಾಣಿಗೆ ಹಿಂಸೆ ಮಾಡುವುದನ್ನೂ ಸಹಿಸಿಕೊಳ್ಳುವುದಿಲ್ಲ ಎಂಬುದನ್ನು ಅನೇಕ ಸಂದರ್ಭಗಳಲ್ಲಿ ಸಾಬೀತು ಪಡಿಸಿವೆ. ಇದಕ್ಕೊಂದು ತಾಜಾ ಉದಾಹರಣೆ ಇಲ್ಲಿದೆ. ವ್ಯಕ್ತಿಯೊಬ್ಬ ನಾಯಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಯಿಯ ಕಿವಿಗಳನ್ನು ಹಿಂಡುತ್ತಿದ್ದ ವ್ಯಕ್ತಿಯನ್ನು ನೋಡಿದ ಅಲ್ಲೇ ಸಮೀಪದಲ್ಲಿದ್ದ … Continued

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್‌ ಆರೋಪದ ನಂತರ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನು ಭೇಟಿಯಾದ ಸಮೀರ್ ವಾಂಖೇಡೆ

ನವದೆಹಲಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ)ಯ ಮುಂಬೈ ಘಟಕದ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರು ಸೋಮವಾರ (ನವೆಂಬರ್ 1) ದೆಹಲಿಯಲ್ಲಿ ರಾಷ್ಟ್ರೀಯ ಆಯೋಗದ ಪರಿಶಿಷ್ಟ ಜಾತಿ (National Commission Schedule Caste) ಅಧ್ಯಕ್ಷ ವಿಜಯ್ ಸಂಪ್ಲಾ ಅವರನ್ನು ಭೇಟಿ ಮಾಡಿದ್ದಾರೆ. ಸಮೀರ್ ವಾಂಖೇಡೆ ಅವರು ಮುಂಬೈನಲ್ಲಿ ಎನ್‌ಸಿಎಸ್‌ಸಿ ಉಪಾಧ್ಯಕ್ಷ ಅರುಣ್ ಹಲ್ದರ್‌ ಅವರನ್ನು ಭೇಟಿಯಾಗಿ … Continued

ಶಸ್ತ್ರಚಿಕಿತ್ಸೆಯ ನಂತರ ಮನೆಗೆ ಹಿಂದಿರುಗಿದ ನಂತರ ನಟ ರಜನಿಕಾಂತ್

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಚೆನ್ನೈನ ಆಸ್ಪತ್ರೆಯಲ್ಲಿ ಶೀರ್ಷಧಮನಿ ರಿವಾಸ್ಕುಲರೈಸೇಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾನುವಾರ ಮನೆಗೆ ಮರಳಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಜನಪ್ರಿಯ ನಟ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದರು. ರಜನಿಕಾಂತ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ರಜನಿಕಾಂತ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ ಬಗ್ಗೆ … Continued

ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಬದಲಾಯಿಸಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು: ಕನ್ನಡವನ್ನು ರಾಜ್ಯದ ಗಡಿಯೊಳಗೆ ಸೀಮಿತವಾಗಿ ನೋಡುತ್ತಿಲ್ಲ. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಗಡಿ ವಿವಾದಗಳು ಇದ್ದಾಗಲೂ ನಾವು ಅದನ್ನು ಮುಂಬೈ ಕರ್ನಾಟಕ ಎಂದು ಹೇಳಬಾರದು. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸೋಮವಾರ ಸಾರ್ವಜನಿಕ ಇಲಾಖೆಯು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ … Continued