ಪಂಜಾಬ್ ಲೋಕ ಕಾಂಗ್ರೆಸ್: ತಮ್ಮ ಪಕ್ಷದ ಹೆಸರು ಘೋಷಣೆ ಮಾಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್

ಚಂಡೀಗಡ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಂಗಳವಾರ ತಮ್ಮ ಹೊಸ ಪಕ್ಷದ ಹೆಸರನ್ನು ಪ್ರಕಟಿಸಿದ್ದಾರೆ. ಅವರು ತಮ್ಮ ಪಕ್ಷದ ಹೆಸರು ಪಂಜಾಬ್ ಲೋಕ ಕಾಂಗ್ರೆಸ್ ಎಂದು ಬಹಿರಂಗಪಡಿಸಿದ್ದಾರೆ. ಪಕ್ಷದ ನೋಂದಣಿಯು ಭಾರತದ ಚುನಾವಣಾ ಆಯೋಗದ ಅನುಮೋದನೆಗೆ ಬಾಕಿ ಇದೆ. ಮಂಗಳವಾರ ಚಂಡೀಗಡದಲ್ಲಿ ಪಕ್ಷದ ಹೆಸರನ್ನು ಬಹಿರಂಗಪಡಿಸಿದ ಕ್ಯಾಪ್ಟನ್ ಅಮರಿಂದರ್ ಸಿಂಗ್, “ನಾವು ನಮ್ಮದೇ … Continued

ಕೆಎಸ್‌ಇಟಿ ಪರೀಕ್ಷೆ ಫಲಿತಾಂಶ ಪ್ರಕಟ : ಸಹಾಯಕ ಪ್ರಾಧ್ಯಾಪಕರಾಗಲು ಅರ್ಹ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮೈಸೂರು: ಮೈಸೂರು ವಿದ್ಯಾಲಯದ 2021ರ ಜುಲೈ ತಿಂಗಳಲ್ಲಿ ನಡೆಸಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ-ಸೆಟ್)ಯಲ್ಲಿ 4779 (ಶೇ.6.84) ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹರಾಗಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದ ಅವರು, ‘ಯುಜಿಸಿ ಪರಿಶೀಲನಾ ಸಮಿತಿ ಸದಸ್ಯರು ಪರಿಶೀಲಿಸಿ ಫಲಿತಾಂಶ ಬಿಡುಗಡೆಗೆ ಅನುಮತಿ ನೀಡಿದ್ದು, ನ.2ರಂದು … Continued

ಕಾಬೂಲ್ ಸೇನಾ ಆಸ್ಪತ್ರೆ ಮೇಲಿನ ಎರಡು ಸ್ಫೋಟಗಳಲ್ಲಿ ಕನಿಷ್ಠ 19 ಸಾವು, 50 ಮಂದಿಗೆ ಗಾಯ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಅಫ್ಘಾನ್​ನ ಅತಿ ದೊಡ್ಡ ಮಿಲಿಟರಿ ಆಸ್ಪತ್ರೆಯ ಬಳಿ ಎರಡು ಸ್ಫೋಟಗಳು ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 19 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 50 ಮಂದಿ ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, ಆತಂಕದ ವಾತಾವರಣ … Continued

ವಿರಾಟ್ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ ವಿರುದ್ಧ ಎಫ್‌ಐಆರ್ ಕೋರಿ ದೆಹಲಿ ಸೈಬರ್ ಕ್ರೈಂ ವಿಭಾಗಕ್ಕೆ ನೋಟಿಸ್ ಜಾರಿ ಮಾಡಿದ ದೆಹಲಿ ಡಿಸಿಡಬ್ಲ್ಯು

ನವದೆಹಲಿ: ಭಾರತ-ಪಾಕಿಸ್ತಾನ ಪಂದ್ಯದ ನಂತರ ವಿರಾಟ್ ಕೊಹ್ಲಿ ಅವರ 9 ತಿಂಗಳ ಮಗಳಿಗೆ ಆನ್‌ಲೈನಿನಲ್ಲಿ ಅತ್ಯಾಚಾರ ಬೆದರಿಕೆಗಳ ವರದಿಗಳ ಕುರಿತು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈ ಸಂಬಂಧ ವಿದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಮಂಗಳವಾರ ದೆಹಲಿ ಪೊಲೀಸ್‌ ಸೈಬರ್ ಕ್ರೈಂ ವಿಭಾಗಕ್ಕೆ … Continued

ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿಗೆ ಇಂದು ಕುಟುಂಬಸ್ಥರು ಪೂಜೆ ಸಲ್ಲಿಸಿ ಹಾಲು, ತುಪ್ಪ ಕಾರ್ಯ ನೆರವೇರಿಸಿದರು. ಪುನೀತ್ ನಿಧನರಾಗಿ ಇಂದಿಗೆ 5ನೇ ದಿನವಾಗಿದ್ದು, ನಗರದ ಕಂಠೀರವ ಸ್ಟುಡಿಯೋಗೆ ಸದಾಶಿವನಗರದಿಂದ 4 ಬಸ್‍ಗಳಲ್ಲಿ ಕುಟುಂಬಸ್ಥರು ಆಗಮಿಸಿದ್ದರು. ಅಪ್ಪು ಸಮಾಧಿಗೆ ಹೂವಿನಿಂದ ಅಲಂಕಾರಗೊಳಿಸಿ, ಅವರಿಗೆ ಇಷ್ಟವಾದಂತಹ ಪದಾರ್ಥಗಳನ್ನು ಮನೆಯಿಂದಲೇ ಮಡಿಯಾಗಿ ಮಾಡಿಕೊಂಡು … Continued

ಬೇನಾಮಿ ಆಸ್ತಿ ಪ್ರಕರಣ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ನಂಟಿರುವ 1000 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಆದಾಯ ತೆರಿಗೆ ಇಲಾಖೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಆಪ್ತ ಸಹಾಯಕರೊಂದಿಗೆ ನಂಟು ಹೊಂದಿರುವ ಮಹಾರಾಷ್ಟ್ರ, ಗೋವಾ ಮತ್ತು ದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆಯು 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ ಇಂಡಿಯಾ ಟುಡೆ ವರದಿ ಮಾಡಿದೆ. ವರದಿ ಪ್ರಕಾರ, ಆದಾಯ ತೆರಿಗೆ ಇಲಾಖೆಯ … Continued

ಹಾನಗಲ್​ ಉಪಚುನಾವಣೆ: ಸಿಎಂ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಗೆಲುವು

ಹಾವೇರಿ: ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಆಡಳಿತಾರೂಢ ಬಿಜೆಪಿ ಮುಗ್ಗರಿಸಿದೆ. ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಿದೆ.  ಇದರಿಂದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹಿನ್ನಡೆಯಾಗಿದೆ. 14ನೇ ಸುತ್ತಿನ ಮುಕ್ತಾಯಕ್ಕೆ ಮುಕ್ತಾಯಕ್ಕೆ 46 ವರ್ಷದ  ಕಾಂಗ್ರೆಸ್ ಅಭ್ಯರ್ಥಿ ಮಾನೆಗೆ 87,490 ಮತಗಳು ಲಭಿಸಿವೆ. ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ 80,117 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್​ ಅಭ್ಯರ್ಥಿ ನಿಯಾಜ್ … Continued

ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಯ ರಮೇಶ ಭೂಸನೂರ ಭರ್ಜರಿ ಗೆಲುವು

ವಿಜಯಪುರ: ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಜಯಗಳಿಸಿದ್ದಾರೆ. 36 ವರ್ಷದ ರಮೇಶ್ ಭೂಸನೂರ (Bhusanur Ramesh Balappa) 31,185 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕಾಂಗ್ರೆಸ್‌ ವಿರುದ್ಧ ಜಯಸಾಧಿಸಿದ್ದಾರೆ. ರಮೇಶ ಭೂಸನೂರ 93,865 ಮತ ಲಭಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ 62,680 ಮತ ಲಭ್ಯವಾಗಿದೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ … Continued

ಹಾನಗಲ್​ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲ್ಲುತ್ತಾರೆಂದು 1 ಎಕರೆ ಜಮೀನು, ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ ಅಭಿಮಾನಿಗಳು…!

ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ (Srinivas Mane) ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಬೆಟ್ಟಿಂಗ್ ಕಟ್ಟುತಿದ್ದಾರೆ. ಕ್ಷೇತ್ರದಲ್ಲಿ ಬೆಟ್ಟಿಂಗ್ ಆಟ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದೆ ಗೆಲ್ಲುತ್ತಾರೆ ಎಂದು ಅವರ ಅಭಿಮಾನಿಯೊಬ್ಬರು ಒಂದು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ್ದು ಮತ್ತೊಂದು ಕಡೆ ಮತ್ತೊಬ್ಬ ಅಭಿಮಾನಿ 1 ಎಕರೆ ಜಮೀನು … Continued

ಅಯೋಧ್ಯೆ ದೀಪೋತ್ಸವ ವಿಶ್ವ ದಾಖಲೆ ಬರೆಯಲು ಸಜ್ಜು: ಪ್ರಜ್ವಲಿಸಲಿವೆ 12 ಲಕ್ಷ ದೀಪಗಳು…!

ಅಯೋಧ್ಯೆ : ಹಿಂದಿನ ವರ್ಷದ ದೀಪಾವಳಿಯ ವಿಶ್ವ ದಾಖಲೆಯನ್ನು ಉತ್ತಮ ಗೊಳಿಸುವ ಉದ್ದೇಶದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಅಯೋಧ್ಯೆಯಲ್ಲಿ 12 ಲಕ್ಷ ಮಣ್ಣಿನ ದೀಪಗಳನ್ನು (Light 12 Lakh Lamps in Ayodhya ) ಬೆಳಗಿಸಲಿದೆ. ಈ ಪೈಕಿ ಒಂಬತ್ತು ಲಕ್ಷ ದೀಪಗಳು ಸರಯು ನದಿಯ ದಡದಲ್ಲಿ ಬೆಳಗಲಿದೆ ಎಂದು ತಿಳಿಸಲಾಗಿದೆ. … Continued