ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾನಮತ್ತ ವ್ಯಕ್ತಿಯಿಂದ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೆ ಯತ್ನ..! ವೀಕ್ಷಿಸಿ

ಬೆಂಗಳೂರು: ಬೆಂಗಳೂರಿನಲ್ಲಿ ಖ್ಯಾತ ತಮಿಳುನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ಯತ್ನ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಟ ಮತ್ತು ಅವರ ಆಪ್ತರೊಂದಿಗೆ ನಿಲ್ದಾಣದ ಆವರಣದಲ್ಲೇ ಜಗಳ ಮಾಡಿಕೊಂಡಿದ್ದು, . ವಾಗ್ವಾದದ ನಂತರ ಪಾನಮತ್ತ ವ್ಯಕ್ತಿ ನಟ ಮತ್ತು ಅವರ ಆಪ್ತರ ಮೇಲೆ ಹಲ್ಲೆ ಮಾಡಿದ್ದಾನೆ.
ಇದಕ್ಕೂ ಮುನ್ನ ವಿಮಾನದಲ್ಲಿ ನಟ ವಿಜಯ್ ಸೇತುಪತಿಯವರ ಪಿಎ ಜೊತೆಗೂ ಸಹ ಪ್ರಯಾಣಿಕನೊಬ್ಬ ಜಗಳ ಮಾಡಿದ್ದ ಎನ್ನಲಾಗಿದೆ. ಪಿಎ ಮತ್ತು ಸಹ-ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಜಗಳ ಮಾಡಿದ ವ್ಯಕ್ತಿಯನ್ನು ಜಾನ್ಸನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಹಲ್ಲೆ ಪ್ರಕರಣ ಸಂಬಂಧ ನಟ ವಿಜಯ್ ಸೇತುಪತಿಯಾಗಲಿ ಅವರ ಆಪ್ತರಾಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಆದರೆ ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ‘ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ದಾಳಿಯನ್ನು ವಿಫಲಗೊಳಿಸಿದ್ದಾರೆ ಮತ್ತು ಕ್ಷಮೆಯಾಚನೆ ಪತ್ರಗಳನ್ನು ಸಲ್ಲಿಸಿದ ನಂತರ ಬಿಡಲಾಯಿತು’ ಎಂದು ತಿಳಿಸಿದ್ದಾರೆ.
ವಿಮಾನವು ಮಧ್ಯರಾತ್ರಿಯ ಸುಮಾರಿಗೆ ಇಳಿದ ನಂತರ, ನಟರಾದ ವಿಜಯ ಸೇತುಪತಿ ಹಾಗೂ ಮಹಾಗಾಂಧಿ ಹೊರನಡೆಯುತ್ತಿದ್ದರು. ಆಗಮನ ವಿಭಾಗದಲ್ಲಿ, ಅಮಲೇರಿದ ಸ್ಥಿತಿಯಲ್ಲಿದ್ದ ಜಾನ್ಸನ್ ಒದೆಯಲು ಪ್ರಯತ್ನಿಸಿದ. ಆದರೆ ಅವರ ಸ್ನೇಹಿತರೊಬ್ಬರು ಅವರನ್ನು ಪಕ್ಕಕ್ಕೆ ತಳ್ಳಿದರು. ಸ್ಥಳದಲ್ಲಿದ್ದ ಸಿಐಎಸ್‌ಎಫ್ ಸಿಬ್ಬಂದಿ ಮಧ್ಯ ಪ್ರವೇಶಿಸಿ ಜಾನ್ಸನ್‌ನನ್ನು ವಶಕ್ಕೆ ಪಡೆದಿದ್ದಾರೆ. ವಿಜಯ್ ಸೇತುಪತಿ ಸೇರಿದಂತೆ ಎರಡೂ ಕಡೆಯವರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆತರಲಾಯಿತು.ಇಬ್ಬರೂ ಯಾವುದೇ ದೂರು ದಾಖಲಿಸದಿರಲು ನಿರ್ಧರಿಸಿದರು. ಇಬ್ಬರಿಂದಲೂ ಕ್ಷಮಾಪಣೆ ಪತ್ರಗಳನ್ನು ತೆಗೆದುಕೊಳ್ಳಲಾಗಿದ್ದು, ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಬಳಿಕ ಬಿಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಜಯ್ ಸೇತುಪತಿ, ಮಹಾಗಾಂಧಿ ಮತ್ತು ಇತರರು ಮಾಸ್ಟರ್ ಚೆಫ್ ತಮಿಳು ಚಿತ್ರೀಕರಣಕ್ಕಾಗಿ ವಿಜಯ್ ಸೇತುಪತಿ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement