ನವದೆಹಲಿ: ಕೋವಿಡ್-19 ಲಸಿಕೆ ಅಭಿಯಾನವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಲಸಿಕೆ ಅಭಿಯಾನವನ್ನು ಹೆಚ್ಚಿಸಲು ನವೀನ ಮಾರ್ಗಗಳನ್ನು ಅಳವಡಿಸಿಕೊಳ್ಳುವಂತೆ ಲಸಿಕೆ ನೀಡಿಕೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳ ಅಧಿಕಾರಿಗಳಿಗೆ ಬುಧವಾರ ಸೂಚಿಸಿದ್ದಾರೆ.
ಇಂದು ಕಡಿಮೆ ಲಸಿಕೆ ವ್ಯಾಪ್ತಿಯನ್ನು ಹೊಂದಿರುವ 40ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇದುವರೆಗೂ ನೀವು ಲಸಿಕಾ ಕೇಂದ್ರದ ಬಳಿಗೆ ಜನರನ್ನು ಕರೆತರುತ್ತಿದ್ದಿರಿ. ಈಗ ನೀವೇ ಪ್ರತಿ ಮನೆಗೂ ತೆರಳಿ ಲಸಿಕೆ ನೀಡುವ ಮೂಲಕ ‘ಹರ್ ಘರ್ ದಸ್ತಕ್ ಆಂದೋಲನ‘ದೊಂದಿಗೆ ಕೈಜೋಡಿಸಬೇಕು‘ ಎಂದು ಹೇಳಿದರು.
ಕೋವಿಡ್ -19 ಲಸಿಕೆ ವಿರುದ್ಧದ ವದಂತಿಗಳ ವಿರುದ್ಧ ಹೋರಾಡಲು ಧಾರ್ಮಿಕ ಮುಖಂಡರನ್ನು ತೊಡಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬುಧವಾರ 40ಕ್ಕೂ ಹೆಚ್ಚು ಜಿಲ್ಲೆಗಳ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪರಿಶೀಲನಾ ಸಭೆಯಲ್ಲಿ ಕೇಳಿಕೊಂಡರು.
ಕೋವಿಡ್-19 ಲಸಿಕೆಗಳ ವಿರುದ್ಧ ವದಂತಿಗಳ ವಿರುದ್ಧ ಹೋರಾಡಲು ಸ್ಥಳೀಯ ಧಾರ್ಮಿಕ ಮುಖಂಡರನ್ನು ತೊಡಗಿಸಿಕೊಳ್ಳಲು ಕಡಿಮೆ ಕೋವಿಡ್ -19 ಲಸಿಕೆ ವ್ಯಾಪ್ತಿಯನ್ನು ಹೊಂದಿರುವ 40 ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ್ದಾರೆ.
ಇತ್ತೀಚೆಗೆ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಉಲ್ಲೇಖಿಸಿ ಮಾತನಾಡಿದ ಮೋದಿ, ‘ಲಸಿಕೆ ಅಗತ್ಯ ಕುರಿತು ಧಾರ್ಮಿಕ ನಾಯಕರ ಮೂಲಕ ಜನರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು‘ ಎಂದರು.
ಕೋವಿಡ್-19 ಲಸಿಕೆಗೆ ಸಂಬಂಧಿಸಿದಂತೆ ಜನರಲ್ಲಿ ವದಂತಿಗಳು ಮತ್ತು ಗೊಂದಲವೂ ಒಂದು ಸವಾಲು. ಇದಕ್ಕೆ ಉತ್ತಮ ಪರಿಹಾರವೆಂದರೆ ಜನರನ್ನು ಹೆಚ್ಚು ಹೆಚ್ಚು ಜಾಗೃತಗೊಳಿಸುವುದು. ಈ ವದಂತಿಗಳ ವಿರುದ್ಧ ಹೋರಾಡಲು ನೀವು ಸ್ಥಳೀಯ ಧಾರ್ಮಿಕ ಮುಖಂಡರ ಹೆಚ್ಚಿನ ಸಹಾಯವನ್ನು ತೆಗೆದುಕೊಳ್ಳಬಹುದು, ”ಎಂದು ಪ್ರಧಾನಿ ಹೇಳಿದರು.
ಇತ್ತೀಚೆಗೆ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿದ್ದನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಜಾಗೃತಿ ಮೂಡಿಸುವ ಧಾರ್ಮಿಕ ಮುಖಂಡರ ಸಂದೇಶವನ್ನು ಜನರಿಗೆ ತಲುಪಿಸಲು ಮತ್ತು ಲಸಿಕೆ ಅಭಿಯಾನವನ್ನು ಉತ್ತೇಜಿಸಲು ವಿಶೇಷ ಒತ್ತು ನೀಡುವ ಅಗತ್ಯವಿದೆ ಎಂದು ಹೇಳಿದರು.
ಕೋವಿಡ್ -19 ಲಸಿಕೆಯ ಮೊದಲ ಡೋಸ್ನೊಂದಿಗೆ ಎರಡನೇ ಡೋಸ್ಗೆ ಸಮಾನ ಗಮನವನ್ನು ನೀಡುವಂತೆ ಅವರು ನಾಗರಿಕರನ್ನು ಒತ್ತಾಯಿಸಿದರು, ನೂರು ಕೋಟಿ ಡೋಸ್ಗಳನ್ನು ನೀಡಿದ ನಂತರ ಸಡಿಲಗೊಂಡರೆ, ಹೊಸ ಬಿಕ್ಕಟ್ಟು ಉದ್ಭವಿಸಬಹುದು ಎಂದು ಹೇಳಿದರು.
ಲಸಿಕೆ ಹಾಕದವರಿಗೆ ಮೊದಲ ಡೋಸ್ ನೀಡಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ಆದರೆ ಎರಡನೇ ಡೋಸ್ಗೂ ಅಷ್ಟೇ ಗಮನ ನೀಡಬೇಕು ಎಂದು ಪ್ರಧಾನಿ ಅಧಿಕಾರಿಗಳಿಗೆ ಹೇಳಿದರು.
ರೋಗ ಮತ್ತು ಶತ್ರುಗಳನ್ನು ಎಂದಿಗೂ ನಗಣ್ಯ ಮಾಡಬಾರದು. ಅವರ ವಿರುದ್ಧ ಕೊನೆಯವರೆಗೂ ಹೋರಾಡಬೇಕು ಎಂದ ಅವರು 100 ವರ್ಷಗಳಲ್ಲಿನ ಅತಿದೊಡ್ಡ ಸಾಂಕ್ರಾಮಿಕ ರೋಗದಲ್ಲಿ ರಾಷ್ಟ್ರವು ಹೇಗೆ ಹಲವಾರು ಸವಾಲುಗಳನ್ನು ಎದುರಿಸಿದೆ ಎಂಬುದನ್ನು ಮನಗಂಡು ಹೊಸ ಪರಿಹಾರಗಳನ್ನು ಕಂಡುಹಿಡಿಯುವುದು ಮತ್ತು ನವೀನ ವಿಧಾನಗಳನ್ನು ಬಳಸುವುದು ವೈರಸ್ ವಿರುದ್ಧದ ಭಾರತದ ಹೋರಾಟದಲ್ಲಿ ಮಹತ್ವದ ವಿಷಯವಾಗಿದೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ