ದಾವಣಗೆರೆ ಸಕ್ಕರೆ ಕಾರ್ಖಾನೆಯಲ್ಲಿ ಪಿಲ್ಲರ್ ಕುಸಿದು ಮೂವರು ಕಟ್ಟಡ ಕಾರ್ಮಿಕರ ಸಾವು, 12 ಜನರಿಗೆ ಗಾಯ

ದಾವಣಗೆರೆ: ದಾವಣಗೆರೆಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತವೊಂದು ಸಂಭವಿಸಿದ್ದು, ಪಿಲ್ಲರ್ ಕುಸಿದ ಪರಿಣಾಮ 3 ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆ ನಗರದ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕದ ಪಿಲ್ಲರ್ ಕುಸಿದು ಮೂರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮೃತರನ್ನು ಕೊಪ್ಪಳ ಮತ್ತು ರಾಯಚೂರು ಮೂಲದ ಮಾನಪ್ಪ(32), ಬಸ್ಸಪ್ಪ(32), ಮಜೀದ್(28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇತರ12 ಮಂದಿ ಗಾಯಗೊಂಡಿದ್ದು, ಈ ಪೈಕಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ದುರಂತ ನಡೆದ ವೇಳೆ ಘಟನಾ ಸ್ಥಳದಲ್ಲಿ 15 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಅವಶೇಷಗಳನ್ನು ತೆರವುಗೊಳಿಸಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಿದರು ಎಂದು ಹೇಳಿದ್ದಾರೆ.
ಹದಡಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ನಿಮ್ಮ ಕಾಮೆಂಟ್ ಬರೆಯಿರಿ

advertisement