ರೈತರ ಮಕ್ಕಳ ಶಿಕ್ಷಣಕ್ಕೆ ಹೊಸ ಶಿಷ್ಯವೇತನ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
10 ನೇ ತರಗತಿ ಪೂರ್ಣಗೊಳಿಸಿದ ನಂತರ ರಾಜ್ಯದ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು, ಸ್ವಾಯತ್ತ ಕಾಲೇಜುಗಳು, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯ ರೈತರ ಮಕ್ಕಳ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತದೆ.ಇದನ್ನು 2021-22 ನೇ ಸಾಲಿನಿಂದ ಜಾರಿಗೆ ತರಲಾಗಿದೆ.
ಹಣದ ಮೊತ್ತವನ್ನು ಶಿಷ್ಯವೇತನ ರೂಪದಲ್ಲಿ ನೀಡಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ ಎಂದು ಆದೇಶ ಹೊರಡಿಸಿದೆ. ಶಿಷ್ಯ ವೇತನವನ್ನು ರಾಜ್ಯದ ಎಲ್ಲಾ ವರ್ಗದ ರೈತರ ಮಕ್ಕಳು ರಾಜ್ಯದ ಇತರೆ ಯಾವುದೇ ಶಿಷ್ಯ ವೇತನವನ್ನು ಪಡೆಯಲು ಆಗದಿದ್ದಲ್ಲಿ, ರೈತರ ಮಕ್ಕಳ ಶಿಷ್ಯ ವೇತನಕ್ಕೆ https://ssp.postmatric.karnataka.gov.in ಪೋರ್ಟಲ್ ಮುಖಾಂತರ ಆನ್ ಲೈನ್ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಒಂದು ಶಿಷ್ಯ ವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರು ಎಂದು ತಿಳಿಸಲಾಗಿದೆ.
ಮಕ್ಕಳ ತಂದೆ ತಾಯಿ ಇಬ್ಬರು ಕೃಷಿ ಜಮೀನಿನ ಒಡೆಯರಾಗಿರಬೇಕು. ರೈತರ ಮಕ್ಕಳು ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ಶಿಷ್ಯ ವೇತನಕ್ಕೆ ಮಾತ್ರ ಅರ್ಹರಾಗಿರುತ್ತಾರೆ. ಈ ಶಿಷ್ಯ ವೇತನವು ಯಾವುದೇ ಕೋರ್ಸ್ ನ ನೆಮಿಸ್ಟರ್ ನಲ್ಲಿ ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ ಪುನಃ ಆ ಸೆಮಿಸ್ಟರ್ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸ ಪುನಾರಾವರ್ತನೆಯಾದರೆ ( ಪುನಃ ಪರೀಕ್ಷೆ ತೆಗೆದುಕೊಂಡರೆ ) ಆ ವಿದ್ಯಾರ್ಥಿಗಳು ಶಿಷ್ಯ ವೇತನ ಪಡೆಯಲು ಅರ್ಹರಾಗಿರುವುದಿಲ್ಲ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement