ನ.19ರಿಂದ ಬಿಎಸ್‌ವೈ, ಕಟೀಲು,, ಶೆಟ್ಟರ್, ಈಶ್ವರಪ್ಪ ರಾಜ್ಯ ಪ್ರವಾಸ

ಬೆಂಗಳೂರು : ಬಿಜೆಪಿ ನಾಯಕರು ನ. 19ರಿಂದ ರಾಜ್ಯದಲ್ಲಿ ‘ಜನ ಸ್ವರಾಜ್’​ ಯಾತ್ರೆ ನಡೆಸಲಿದ್ದಾರೆ.
ನವೆಂಬರ್‌ 19ರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರ ತಂಡ ರಾಜ್ಯ ಪ್ರವಾಸ ನಡೆಸಲಿದ್ದು, ಒಟ್ಟು 6 ನಾಯಕರ ತಂಡ ಪ್ರವಾಸ ಕೈಗೊಳ್ಳಲಿದೆ. ಯಡಿಯೂರಪ್ಪ ನೇತೃತ್ವದ ತಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ನೇತೃತ್ವದಲ್ಲಿ 9 ನಾಯಕರ ತಂಡ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ 8 ನಾಯಕರ ತಂಡ ಪ್ರವಾಸ ಕೈಗೊಳ್ಳಲಿದೆ. ಜಗದೀಶ್ ಶೆಟ್ಟರ್‌ ನೇತೃತ್ವದಲ್ಲಿ ಬಿಜೆಪಿಯ 7 ನಾಯಕರ ತಂಡ ಪ್ರವಾಸ ಕೈಗೊಳ್ಳಲಿದೆ. ನ.19ರಿಂದ 22ರ ವರೆಗೆ ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿಯಲ್ಲಿ ಪ್ರವಾಸ ಕೈಗೊಳ್ಳಲಿದೆ. ಕಟೀಲು ತಂಡ ನ.19ರಿಂದ ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್​ ಪ್ರವಾಸ ನಡೆಸಲಿದೆ.
ಹಾಗೂ ಜಗದೀಶ್​ ಶೆಟ್ಟರ್​ ತಂಡ ದಾವಣಗೆರೆ, ಚಿತ್ರದುರ್ಗ, ತುಮಕೂರು , ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದ್ದು, ಕೆ.ಎಸ್. ಈಶ್ವರಪ್ಪ ತಂಡ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದಲ್ಲಿ ಪ್ರವಾಸ ಕೈಗೊಳ್ಳಲಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement