ಹಳೆ ವೈಷಮ್ಯ: ಗ್ರಾ.ಪಂ ಉಪಾಧ್ಯಕ್ಷ ಸೇರಿ ಇಬ್ಬರ ಕೊಲೆ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆಯಲ್ಲಿ ತಡರಾತ್ರಿ ಜೋಡಿ ಕೊಲೆಯಾದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಶೋಕ್ (46) ಹಾಗೂ ಸೋಮೇಶ್ವರ್   (35) ಕೊಲೆಯಾದವರು. ಎಂದು ಗುರುತಿಸಲಾಗಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯ ನಿವಾಸಿಯಾದ ಅಶೋಕ್ ಮತ್ತು ಸೋಮಶೇಖರ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಟಾಟಾ ಏಸ್ ವಾಹನವನ್ನು ಅವರ ಮೇಲೆ ಹತ್ತಿಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಗ್ರಾಮ ಪಂಚಾಯತ ಉಪಾಧ್ಯಕ್ಷ ಅಶೋಕ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಸೋಮಶೇಖರ್ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಭೀಮಾ ನಾಯ್ಕನ ತಾಂಡಾದಲ್ಲಿ ನಿನ್ನೆ ಮಧ್ಯರಾತ್ರಿ 1 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಹಣಕಾಸಿನ ವಿಚಾರಕ್ಕೆ ವೈಷಮ್ಯ ಹೆಚ್ಚಾಗಿ ಈ ಕೃತ್ಯವನ್ನು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

0 / 5. 0

ಪ್ರಮುಖ ಸುದ್ದಿ :-   ಕೊಲೆ ಪ್ರಕರಣ: ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement