ಟವೆಲ್ ನೀಡಲು ತಡ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ ಮಹಾಶಯ..!

ಬಾಲಾಘಾಟ್: ಸ್ನಾನ ಮುಗಿದ ಬಳಿಕ ಮೈ ಒರೆಸಿಕೊಳ್ಳಲು ಟವೆಲ್ ಕೊಡಲು ತಡ ಮಾಡಿದ ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಧ್ಯ ಪ್ರದೇಶದ ಕಿರಣಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿರುವ ಬಾಲಾಘಾಟ್ ಜಿಲ್ಲೆಯ ಹಿರಾಪುರ ಗ್ರಾಮದ ರಾಜಕುಮಾರ್ ಬಹೆ (50) ಎಂಬವರು ಈ ಕೃಯವೆಸಗಿದವರು ಎಂದು ಗುರುತಿಸಲಾಗಿದೆ. ಅವರು ಈಗ ತಮ್ಮ ಪತ್ನಿ ಪುಷ್ಪಾ ಬಾಯಿ (45) ಅವರನ್ನು ಹತ್ಯೆ ಮಾಡಿದ ಆರೋಪಕ್ಕಾಗಿ ಬಂಧನಕ್ಕೆ ಒಳಗಾಗಿದ್ದಾರೆ.
ಶನಿವಾರ ಸಂಜೆ ಸ್ನಾನ ಮುಗಿದ ಬಳಿಕ ಟವೆಲ್ ನೀಡುವಂತೆ ತಮ್ಮ ಪತ್ನಿ ಬಳಿ ಈ ಪತಿ ಮಹಾಶಯ ಕೇಳಿದ್ದಾನೆ. ನಾನು ಪಾತ್ರೆ ತೊಳೆಯುತ್ತಿದ್ದೇನೆ. ಸ್ವಲ್ಪ ಹೊತ್ತು ಕಾಯಿರಿ ಎಂದು ಪತ್ನಿ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ರಾಜ್ ಕುಮಾರ್ ಸಲಾಕೆಯಿಂದ ಪತ್ನಿಯ ತಲೆಗೆ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲ್ಲೆ ನಡೆಯುವಾಗ ತಡೆಯಲು ತಡೆಯಲು ಯತ್ನಿಸಿದ 23 ವರ್ಷದ ಪುತ್ರಿಗೂ ಬೆದರಿಕೆ ಹೆದರಿಸಿದ್ದಾನೆ.
ಕುಟುಂಬದ ಸದಸ್ಯರು ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement