ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರದಾನ

ನವದೆಹಲಿ: ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರದಾನ ಮಾಡಲಾಯಿತು.
2019 ರ ಡಿ.29 ರಂದು ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮಿಗಳು ಇಹಲೋಕ ತ್ಯಜಿಸಿದ್ದರು. ಅಧ್ಯಾತ್ಮ ಕ್ಷೇತ್ರದಲ್ಲಿ ಅವರ ಕೊಡುಗೆ, ಸೇವೆಯನ್ನು ಗೌರವಿಸಿ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ನಾರಾಣಾಚಾರ್ಯ ಹಾಗೂ ಶ್ರೀಮತಿ ಕಮಲಮ್ಮ ಅವರ ಎರಡನೇ ಪುತ್ರನಾಗಿ 1931, ಏಪ್ರಿಲ್ 27 ರಂದು ಜನಿಸಿದ್ದ ವೆಂಕಟರಮಣರಿಗೆ 8 ವರ್ಷದ ಬಾಲ್ಯದಲ್ಲೇ ಸನ್ಯಾಸ ನೀಡಾಲಾಗಿತ್ತು. 1954 ರ ಮೊದಲ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಿದ್ದರು ಈ ಬಳಿಕ 2016 ರ ಜ.18 ರಲ್ಲಿ 5 ನೇ ಬಾರಿಗೆ ಪರ್ಯಾಯ ಪೀಠಾರೋಣ ಮಾಡಿದ್ದು ದಾಖಲೆಯಾಗಿದೆ.
ಅಸ್ಪೃಶ್ಯತೆ ವಿರುದ್ಧವೂ ಶ್ರೀ ವಿಶ್ವೇಶ ತೀರ್ಥರು ಹೋರಾಟ ಮಾಡಿದ್ದರು.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಈಗಿನ ಪೀಠಾಧಿಪತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದರು. ವಿಶ್ವಪ್ರಸನ್ನ ತೀರ್ಥರು ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿವೆ.
ಪ್ರಶಸ್ತಿ ಸ್ವೀಕರಿಸುವುದಕ್ಕೂ ಮುನ್ನ ಪಾದುಕೆಗಳನ್ನು ವೇದಿಕೆಯಿಂದ ಕೆಳಗೆ ಬಿಟ್ಟಿದ್ದು, ಅನುಕರಣೀಯ ನಡೆ ಎಂದು ಮೆಚ್ಚುಗೆ ವ್ಯಕ್ತವಾಗತೊಡಗಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement