ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಪುನೀತ ನೆನೆದು ಕಣ್ಣೀರಿಡುತ್ತ ಅಭಿಮಾನಿಗಳಿಗೆ ಊಟ ಬಡಿಸಿದ ಶಿವರಾಜಕುಮಾರ .!

ಬೆಂಗಳೂರು: ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಪುನೀತ ನೆನೆದು ಕಣ್ಣೀರಿಡುತ್ತ ಅಭಿಮಾನಿಗಳಿಗೆ ಊಟ ಬಡಿಸಿದ ಶಿವರಾಜಕುಮಾರ .!
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ ಅರಮನೆ ಮೈದಾನದಲ್ಲಿ ದೊಡ್ಮನೆ ಕುಟುಂಬದಿಂದ ಅನ್ನಸಂತರ್ಪಣೆ ನಡೆಯುತ್ತಿದೆ. ಭೋಜನ ಕೂಟದಲ್ಲಿ ಅಭಿಮಾನಿಗಳಿಗೆ ತನ್ನ ತಮ್ಮ ಅಪ್ಪು ನೆನದು ಕಣ್ಣೀರಿಡುತ್ತಲೇ ನಟ ಶಿವರಾಜ್ ಕುಮಾರ್ ಊಟ ಬಡಿಸಿದ್ದಾರೆ.
ಅರಮನೆ ಮೈದಾನದ ತ್ರಿಪುರವಾಹಿನಿಯಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗಾಗಿ ಇಂದು, ಅನ್ನ ಸಂತರ್ಪಣೆ ಕಾರ್ಯವನ್ನು ಡಾ.ರಾಜಕುಮಾರ ಕುಟುಂಬದಿಂದ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದಂತ ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಾವೇ ಖುದ್ದು ನಿಂತು ಅಭಿಮಾನಿಗಳಿಗೆ ಊಟವನ್ನು ಬಡಿಸಿದ್ದಾರೆ. ಈ ವೇಳೆ ಅವರು ಭಾವುಕರಾಗಿದ್ದಾರೆ.
ಇಂದು ಪುನೀತ್ ರಾಜ್ ಕುಮಾರ್ ನಿಧರಾಗಿ 12ನೇ ದಿನ ಕಳೆದಿದೆ. ಈ ಸಂದರ್ಭದಲ್ಲಿ ಅರಮನೆ ಮೈದಾನದಲ್ಲಿ ಅಭಿಮಾನಿಗಳು, ಗಣ್ಯರಿಗಾಗಿ ಅನ್ನಸಂತರ್ಪಣೆ ಕಾರ್ಯ ನಡೆಸಲಾಗುತ್ತಿದೆ. ವೆಜ್ ಹಾಗೂ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿದೆ. 15 ಸಾವಿರಕ್ಕೂ ಹೆಚ್ಚು ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮತ್ತು ಐದು ಸಾವಿರಕ್ಕೂ ಹೆಚ್ಚು ಜನರಿಗೆ ಸಸ್ಯಾಹಾರಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 22 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅರಮನೆ ಮೈದಾನದ ಸುತ್ತ ಪೊಲೀಸರಿಂದ ಬಂದೋಬಸ್ತ್‌ ಒದಗಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಭಾವನಾತ್ಮಕ ಪೋಸ್ಟ್ ಮಾಡಿದ ರಾಘವೇಂದ್ರ ರಾಜ್‌ಕುಮಾರ್…
ನಟ ರಾಘವೇಂದ್ರ ರಾಜ್‌ಕುಮಾರ್ ತನ್ನ ತಮ್ಮ ಪುನೀತ್ ನೆನೆದು ಫೇಸ್‌ಬುಕ್​ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಯಾರಿಗೂ ಗೊತ್ತಾಗದಂತೆ ನೀನು ಸಮಾಜ ಸೇವೆ ಮಾಡಿದ್ದೀಯಾ. ನಿನ್ನಂತೆ ಸಮಾಜಸೇವೆ ಮಾಡುವ ಶಕ್ತಿಯನ್ನು ನನಗೆ ನೀಡು. ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ ಎಂದು ರಾಘವೇಂದ್ರ ಬರೆದುಕೊಂಡಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement