ಬಸ್‌-ಟ್ಯಾಂಕರ್‌ ಡಿಕ್ಕಿ, ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದ ಬಸ್‌ : 12 ಪ್ರಯಾಣಿಕರು ಸಜೀವ ದಹನ

ಜೈಪುರ್ : ಟ್ಯಾಂಕರ್‌ ಹಾಗೂ ಖಾಸಗಿ ಬಸ್‌ ನಡುವೆ ನಡೆದ ಅಪಘಾತದಲ್ಲಿ ಖಾಸಗಿ ಬಸ್‌ ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದು ಬಸ್ಸಿನಲ್ಲಿದ್ದ 12 ಜನ ಪ್ರಯಾಣಿಕರು ಸಜೀವವಾಗಿ ದಹನವಾದ ಘಟನೆ ರಾಜಸ್ಥಾನದ ಬಾರ್ಮರ್‌ – ಜೋಧ್‌ಪುರ ಹೆದ್ದಾರಿಯಲ್ಲಿ ಸಂಭವಿಸಿದೆ.
ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದು ಈ ಪೈಕಿ 10 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಬಾರ್ಮರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪಕ್‌ ಭಾರ್ಗವ್‌ ತಿಳಿಸಿದ್ದಾರೆ. ಬಸ್‌ ರಾಜಸ್ಥಾನದ ಬಲೋತ್ರಾದಿಂದ ಹೊರಟಿತ್ತು ಹಾಗು ಬಾರ್ಮರ್‌ ಹಾಗೂ ಜೋಧ್‌ಪುರ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ.
ಇದುವರೆಗೆ ಒಟ್ಟು ಬಸ್ಸಿನಲ್ಲಿದ್ದ 12 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ಪೊಲೀಸರು ರಕ್ಷಣಾ ಕಾರ್ಯವನ್ನು ಮುಂದುವರಿಸಿದ್ದಾರೆ.
ಅಪಘಾತದಿಂದಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸುವ ಕಾರ್ಯವನ್ನು ಮಾಡಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಖ್‌ ಗೆಹ್ಲೋಟ್‌ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement