ಇಂದು ಒನಕೆ ಓಬವ್ವ ಜಯಂತಿ: ಕನ್ನಡದಲ್ಲೇ ಟ್ವೀಟ್​ ಮಾಡಿ ವೀರವನಿತೆ ಸ್ಮರಿಸಿದ ಪ್ರಧಾನಿ ಮೋದಿ

ಬೆಂಗಳೂರು: ಇಂದು ವೀರವನಿತೆ ಒನಕೆ ಓಬವ್ವ ಜಯಂತಿ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್​ ಮಾಡಿ ಒನಕೆ ಓಬವ್ವನ ಸ್ಮರಣೆ ಮಾಡಿದ್ದಾರೆ.

18ನೇ ಶತಮಾನದ ಚಿತ್ರದುರ್ಗದ ಪಾಳೆಗಾರ ವೀರ ಮದಕರಿ ನಾಯಕನ ಆಡಳಿತದಲ್ಲಿ ಚಿತ್ರದುರ್ಗ ಕೋಟೆಯ ಕಾವಲುಗಾರನಾಗಿದ್ದ ಕಹಳೆ ಮದ್ದಹನುಮಪ್ಪನ ಪತ್ನಿ ಒನಕೆ ಓಬವ್ವನ ಸಾಹಸ ಇತಿಹಾಸದಲ್ಲಿ ಸದಾ ಸ್ಮರಣೀಯ. ದಾಳಿ ಮಾಡಲು ಕಳ್ಳತನದಲ್ಲಿ ನುಗ್ಗಿದ ಹೈದರಲಿ ಸೈನಿಕರನ್ನು ತನ್ನ ಒನಕೆಯಲ್ಲೇ ಕೊಂದು ಕೊನೆಗೆ ವೀರ ಮರಣವನ್ನಪ್ಪಿದ ಧೀರ ಮಹಿಳೆಒನಕೆ ಓಬವ್ವ ಎಂದರೆ ಕನ್ನಡ ನಾಡಿನ ಪ್ರತಿಯೊಬ್ಬರಿಗೂ ಗೊತ್ತಿದೆ.

ಒನಕೆ ಓಬವ್ವನ ಜಯಂತಿಯನ್ನು ರಾಜ್ಯಾದ್ಯಂತ ನವೆಂಬರ್​ 11ಕ್ಕೆ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದ ವತಿಯಿಂದ ಈ ಜಯಂತಿ ಆಚರಣೆ ನಡೆಯಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇಂದು ಒನಕೆ ಓಬವ್ವ ಜಯಂತಿ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಒನಕೆ ಒವ್ವಳನ್ನು ಸ್ಮರಿಸಿಕೊಂಡಿದ್ದಾರೆ. ವೀರವನಿತೆ ಒಕನೆ ಓಬವ್ವ ಜಯಂತಿ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ, ಯಾರೂ ಮರೆಯಲು ಸಾಧ್ಯವಿಲ್ಲ. ಅವರು ನಾರಿಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಟ್ವೀಟ್‌ನಲ್ಲಿ ಕನ್ನಡದಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement