ದೆಹಲಿಯಲ್ಲಿ ಉಸಿರುಗಟ್ಟಿಸ್ತಿದೆ ವಾತಾವರಣ : ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರ ಬರುವಂತೆ ಸಲಹೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅತಿಯಾದ ವಾಯು ಮಾಲಿನ್ಯ ಉಂಟಾದ ಹಿನ್ನೆಲೆಯಲ್ಲಿ ಜನರು ತಮ್ಮ ಮನೆಗಳಿಂದ ಹೊರಗೆ ಬರಬೇಡಿ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಸಲಹೆ ನೀಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ದೆಹಲಿಯ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ತಮ್ಮ ವಾಹನ ಬಳಕೆಯನ್ನು ಕನಿಷ್ಠ 30 ಪ್ರತಿಶತದಷ್ಟು ಕಡಿತಗೊಳಿಸುವಂತೆ ಸೂಚಿಸಿದೆ. ನಗರದ ನಾಗರಿಕರು … Continued

ನವೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ದಕ್ಷಿಣ ವಲಯದ ಸಮನ್ವಯದ ಸಭೆ, ಸಿಎಂ ಬೊಮ್ಮಾಯಿ ಭಾಗಿ

ಬೆಂಗಳೂರು: ದಕ್ಷಿಣ ವಲಯದ ಸಮನ್ವಯಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 14 ರಂದುಮುಖ್ಯಮಂತ್ರಿಗಳ ಸಭೆ ನಡೆಯಲಿದ್ದು, ನಾನು ಭಾಗವಹಿಸಲಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಪೂರ್ವಭಾವಿಯಾಗಿ ಶುಕ್ರವಾರ ಸಭೆ ನಡೆಸಿ, ಸಮ್ಮೇಳನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ವಿಧಾನಸೌಧದ ಸಮ್ಮೇಳನ … Continued

ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ, ರಾಜ್ಯಾದ್ಯಂತ ಏಕಕಾಲದಲ್ಲಿ ಪರೀಕ್ಷೆ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಇಂದು ಪ್ರಕಟ ಮಾಡಲಾಗಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿಯ ಮಧ್ಯವಾರ್ಷಿಕ ಪರೀಕ್ಷೆಗಳನ್ನು ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಸಲು ತೀರ್ಮಾನಿಸಿದೆ. ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು (ನವೆಂಬರ್ 12) ವೇಳಾಪಟ್ಟಿ … Continued

ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ತನ್ನ ಭುಜದ ಮೇಲೆ ಹೊತ್ತೊಯ್ದು ರಕ್ಷಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಚೆನ್ನೈ: ನಗರದ ಭೀಕರ ಮಳೆ ಮಧ್ಯೆಯೇ ಎಚ್ಚರ ತಪ್ಪಿದ್ದ ಯುವಕನೊಬ್ಬನನ್ನು ಮಹಿಳಾ ಪೊಲೀಸ್‌ ಇನ್ಸ್ಪೆಕ್ಟರ್‌ ಭುಜದ ಮೇಲೆ ಹೊತೊಯ್ದು ನಂತರ ರಿಕ್ಷಾದಲ್ಲಿ ಹಾಕಿ ಚೆನ್ನೈ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಗುರುವಾರ, ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರು ಭಾರೀ ಮಳೆಯ ನಡುವೆ ಚೆನ್ನೈನ ಟಿಪಿ ಛತ್ರಂ ಪ್ರದೇಶದ … Continued

ಚಿನ್ನದಂಗಡಿಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ..! ವೀಕ್ಷಿಸಿ

ಉಡುಪಿಯ ಜ್ಯುವೆಲರಿಯೊಂದಲರಲಿ ಬೃಹತ್‌ ಗಾತ್ರದ ಹೆಬ್ಬಾವು ಸೇರಿಕೊಂಡಿತ್ತು. ಕೆಲಸಕ್ಕೆ ಬಂದ ಉಡುಪಿಯ ನೊವೆಲ್ಟಿ ಜ್ಯುವೆಲರಿ ಸಿಬ್ಬಂದಿ ತಮ್ಮ ಅಂಗಡಿಯ ಮೇಲ್ಛಾವಣಿಯಲ್ಲಿ ಅವಿತು ಕುಳಿತಿದ್ದ ಸುಮಾರು ಹತ್ತು ಅಡಿಗಳಷ್ಟು ಬೃಹತ್‌ ಗಾತ್ರದ ಹೆಬ್ಬಾವನ್ನು ನೋಡಿ ಕಂಗಾಲಾದರು. ಅದು ಅಂಗಡಿಯ ಮೇಲ್ಛಾವಣಿಯಲ್ಲಿ ಅಡಗಿ ಕುಳಿತುಕೊಂಡಿತ್ತು. ಈ ಕುರಿತು ಮಂಗಳೂರು ಮಿರರ್‌.ಕಾಮ್‌ ವರದಿ ಮಾಡಿದ್ದು, ವಿಡಿಯೊ ಸಹ ಹಂಚಿಕೊಂಡಿದೆ. ವರದಿ … Continued

ನ.16ರಂದು ಅರಮನೆ ಮೈದಾನದಲ್ಲಿ ʼಪುನೀತಾ ನಮನʼ ಕಾರ್ಯಕ್ರಮ : ಸಿನಿರಂಗಕ್ಕೆ ಮಾತ್ರ ಪ್ರವೇಶ

ಬೆಂಗಳೂರು : ಪವರ್‌ ಸ್ಟಾರ್‌ ಪುನೀತರಾಜ್‌ಕುಮಾರ್‌ ನಿಧನರಾಗಿ ಎರಡು ವಾರ ಕಳೆದಿವೆ. ಅವರ ಸ್ಮರಣಾರ್ಥ ನವೆಂಬರ್​ 16ರಂದು ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ್ ನಮನ’ ಕಾರ್ಯಕ್ರಮ ಆಯೋಚಿಸಿದೆ. ನವೆಂಬರ್‌ 16ರಂದು ಅರಮನೆ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 3 ಘಂಟೆ ನಂತರ ಕಾರ್ಯಕ್ರಮ ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, … Continued

ಸಾಮೂಹಿಕ ಅತ್ಯಾಚಾರ ಪ್ರಕರಣ; ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

ಲಕ್ನೋ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್​ ಪ್ರಜಾಪತಿ (Gayatri Prajapati) ಹಾಗೂ ಇತರ ಇಬ್ಬರು ಆರೋಪಿಗಳಿಗೆ ಲಕ್ನೋ ವಿಶೇಷ ಕೋರ್ಟ್‌ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉತ್ತರಪ್ರದೇಶದ ಸಮಾಜವಾದಿ ಪಕ್ಷದ  ಮುಖಂಡ ಹಾಗೂ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಸೇರಿ ಮೂವರು ಅಪರಾಧಿಗಳಿಗೆ ಜೀವಾವಧಿ … Continued

ಬಿಟ್ ಕಾಯಿನ್ ಪ್ರಕರಣ: ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು: ರಾಜಕೀಯ ವಿವಾದಕ್ಕೆ ಕಾರಣವಾಗಿರುವ ಬಿಟ್‌ಕಾಯಿನ್ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದ್ದು, ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಈ ಪ್ರಕರಣದ ತನಿಖೆಯಾಬೇಕು ಎಂದು ಶುಕ್ರವಾರ ವಿಪಕ್ಷ ಕಾಂಗ್ರೆಸ್ ಶುಕ್ರವಾರ ಒತ್ತಾಯಿಸಿದೆ. ಇಂದು (ಶುಕ್ರವಾರ) ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಬಿಟ್‌ಕಾಯಿನ್ ಹಗರಣದ ಬಗ್ಗೆ … Continued

ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿವರ್ಷ ೨೫೦ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ-ಕ್ರೀಡಾಪಟುಗಳಿಗೆ ಉಚಿತ ಪ್ರವೇಶ:ಡಾ.ಅಜಿತಪ್ರಸಾದ

ಧಾರವಾಡ : ಅನ್ನದಾನಂ ಕ್ಷಣಿಕ ತೃಪ್ತಿಃ ವಿದ್ಯಾದಾನಂ ಯಾವಜ್ಜೀವಂ ಎಂಬ ಮಾತು ಸರ್ವಕಾಲಿಕವಾದದ್ದು, ಹಸಿದವರಿಗೆ ಅನ್ನ ಹಾಕಿದಾಗ ಆ ಕ್ಷಣದ ತೃಪ್ತಿ ಮಾತ್ರ ಹಸಿದವನಿಗೆ ಸಿಗುತ್ತದೆ. ಆದರೆ ವಿದ್ಯಾದಾನ ಮಾತ್ರ ವಿದ್ಯೆಯನ್ನು ಪಡೆದವನ ಜೀವನದುದ್ದಕ್ಕೂ ಅವನಿಗೆ ತೃಪ್ತಿಯನ್ನು ಕೊಡುತ್ತದೆ. ಆ ನಿಟ್ಟಿನಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ವಿದ್ಯೆಯನ್ನು ನೀಡುತ್ತ ಬಂದಿದೆ ಎಂದು ಜನತಾ ಶಿಕ್ಷಣ ಸಮಿತಿಯ … Continued

ನೀಟ್‌ ಪ್ರಕರಣ: ಮರುಕವಿದೆ, ಆದರೆ ಇಬ್ಬರಿಗಾಗಿ ಮರುಪರೀಕ್ಷೆ ನಡೆಸಲಾಗದು-ಸುಪ್ರೀಂ ಕೋರ್ಟ್‌

ನವದೆಹಲಿ: ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಅಜಾಗರೂಕತೆಯಿಂದಾಗಿ ತಮ್ಮ ಪರೀಕ್ಷಾ ಬುಕ್‌ಲೆಟ್‌ ಹಾಗೂ ಒಎಂಆರ್‌ ಉತ್ತರ ಪತ್ರಿಕೆಗಳು ಕಲಬೆರಕೆಯಾಗಿವೆ ಎಂದು ಆರೋಪಿಸಿದ್ದ ಇಬ್ಬರು ವಿದ್ಯಾರ್ಥಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುಪರೀಕ್ಷೆಗೆ ಆದೇಶಿಸಿದ್ದ ಬಾಂಬೆ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಪಕ್ಕಕ್ಕೆ ಸರಿಸಿದೆ. ಈ ಇಬ್ಬರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪ್ರಶ್ನೆಪತ್ರಿಕೆಯೊಂದಿಗೆ ಸರಿಯಾಗಿ ಹೊಂದಿಸಲಾಗುವುದು ಎಂದು ಸಾಲಿಸಿಟರ್ ಜನರಲ್‌ … Continued