ಕಾಶ್ಮೀರ ಕಣಿವೆಯಲ್ಲಿ ಮೂವರು ಭಯೋತ್ಪಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದು ಹಾಕಿವೆ. ಶ್ರೀನಗರದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಮುಜಾಹಿದ್ದೀನ್ ಗಜ್ವಾತುಲ್ ಹಿಂದ್‌ಗೆ ಸೇರಿದ ಪುಲ್ವಾಮಾದ ಅಮೀರ್ ರಿಯಾಜ್ ಎಂದು ಗುರುತಿಸಲಾದ ಒಬ್ಬ ಭಯೋತ್ಪಾದಕನನ್ನು ಸೇನೆ ಕೊಂದು ಹಾಕಿದೆ. ಈತ ಲೆಥ್‌ಪೋರಾ ಭಯೋತ್ಪಾದಕ ದಾಳಿಯ ಆರೋಪಿಗಳಲ್ಲಿ ಒಬ್ಬನ ಸಂಬಂಧಿಯಾಗಿದ್ದು, ಫಿದಾಯಿನ್ ದಾಳಿ ನಡೆಸಲು ಈತನನ್ನು ನಿಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರದಲ್ಲಿ ದಾಳಿ ನಡೆಸುವ ಮೊದಲು ಈತ ವಿಡಿಯೊವನ್ನು ಚಿತ್ರೀಕರಿಸಿಕೊಂಡಿದ್ದ. ಆದರೆ ಅದಕ್ಕೂ ಮೊದಲು ಭದ್ರತಾ ಪಡೆಗಳು ಆ ದಾಳಿಯನ್ನು ತಟಸ್ಥಗೊಳಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮತ್ತಿಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಇವರಿಬ್ಬರೂ ಹಿಜ್ಬ್ ಉಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರು. ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಿಕೊಳ್ಳುವಲ್ಲಿ ಉಗ್ರರು ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಇವರನ್ನು ಶಿರಾಜ್ ಮೊಲ್ವಿ ಮತ್ತು ಯವರ್ ಭಟ್‌ ಎಂದು ಗುರುತಿಸಲಾಗಿದ್ದು, ಇವರು ಹಿಜ್ಬುಲ್‌ ಮುಜಾಹಿದ್ದೀನ್‌ ಜಿಲ್ಲಾ ಕಮಾಂಡರ್‌ಗಳೆಂದು ಹೇಳಲಾಗಿದೆ. ಶಿರಾಜ್ 2016 ರಿಂದ ಸಕ್ರಿಯರಾಗಿದ್ದಾರೆ ಮತ್ತು ಮುಗ್ಧ ಯುವಕರನ್ನು ಭಯೋತ್ಪಾದಕ ಚಟುವಡಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಮತ್ತು ಹಲವಾರು ಜನರ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದ. ನಮಗೆ ದೊಡ್ಡ ಯಶಸ್ಸು” ಎಂದು ಜಮ್ಮು ಮತ್ತು ಕಾಶ್ಮೀರ ಐಜಿ ವಿಜಯಕುಮಾರ ಹೇಳಿದ್ದಾರೆ.
ಎರಡೂ ಸ್ಥಳಗಳಿಂದ ಬೃಹತ್ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement