ಬಾಗಲಕೋಟೆ: ಸಿದ್ದರಾಮಯ್ಯ ಅಭಿಮಾನಿಯೊಬ್ಬರಿಗೆ ಮಾಜಿ ಸಚಿವ ಎಚ್.ವೈ. ಮೇಟಿ ಕಪಾಳಮೋಕ್ಷ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿಯ ಕಾರ್ಯಕ್ರಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಸಿದ್ದರಾಮಯ್ಯ ಅವರನ್ನು ನೋಡುವುದಕ್ಕೆ ಅಭಿಮಾನಿಗಳು ಬಂದಿದ್ದರು. ನೂಕುನುಗ್ಗಲು ವೇಳೆ ಎಚ್.ವೈ. ಮೇಟಿಯನ್ನ ಜನರು ತಳ್ಳಾಡಿದ್ದಾರೆ. ತಳ್ಳಾಟ ವೇಳೆ ಕಾಲು ತುಳಿದಿದ್ದಕ್ಕೆ ಕೋಪಗೊಂಡ ಮೇಟಿ ಆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಬಾದಾಮಿಯಲ್ಲಿ ಕಲ್ಯಾಣ ಮಂಪಟ ಉದ್ಘಾಟನೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮೀಪದಿಂದ ನೋಡಲು ಅವರ ಅಭಿಮಾನಿಗಳು ಮುನ್ನುಗ್ಗಿದ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾದಾಗ ಘಟನೆ ನಡೆದಿದೆ. ಶಿರೂರಿನ ಸಿದ್ದು ಎಂಬ ವ್ಯಕ್ತಿಗೆ ಮೇಟಿ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಕೆಲತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಜೆಡಿಎಸ್ ಕಾರ್ಯಕರ್ತರ ಕೆನ್ನೆಗೆ ಹೊಡೆದಿದ್ದರು..
ನಿಮ್ಮ ಕಾಮೆಂಟ್ ಬರೆಯಿರಿ