ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ಮುಂದೂಡಿಕೆ :ವರದಿ

ಬೆಂಗಳೂರು: ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ, ಆದರೆ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಮಂಡಳಿಯಿಂದ ಇನ್ನೂ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಈ ಮೊದಲು ಪರೀಕ್ಷೆಯನ್ನು ನವೆಂಬರ್ 29 ರಿಂದ ನಡೆಸಲು ನಿರ್ಧರಿಸಲಾಗಿತ್ತು.ಇತ್ತೀಚೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪರೀಕ್ಷೆ ಮಾದರಿಯಲ್ಲಿ ಪ್ರಮುಖ ಬದಲಾವಣೆಯಾದ ಕಾರಣ, ಪರೀಕ್ಷೆ ಮುಂದೂಡಲಾಗಿದೆ ಎನ್ನಲಾಗಿದೆ.ಪಾಲಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಮಧ್ಯವಾರ್ಷಿಕ ಪರೀಕ್ಷೆ ಪಬ್ಲಿಕ್‌ ಪರೀಕ್ಷೆಯಾಗಿ ನಡೆಸುವುದನ್ನು ವಿರೋಧಿಸಿದ್ದರು. ಅಲ್ಲದೆ, ಹಲವರು ಕಾಲೇಜು ಹಂತದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಚಿವರು, ಉಪನ್ಯಾಸಕರು, ಪೋಷಕರ ಜತೆ ಸಭೆ ನಡೆದಿದೆ. ಪ್ರಸ್ತುತ ಪರೀಕ್ಷೆ ಮುಂದೂಡಿದ್ದು, ಹೊಸ ವೇಳಾಪಟ್ಟಿ ಶೀಘ್ರ ಬಿಡುಗಡೆ ಆಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಹೊಸ ಮಾದರಿಯನ್ನು ರಾಜ್ಯದಾದ್ಯಂತ ಹಲವು ಪ್ರಾಂಶುಪಾಲರು, ಉಪನ್ಯಾಸಕರು ಸ್ವಾಗತಿಸಿದ್ದರು. ಆದರೆ ಮಧ್ಯವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಅವಕಾಶವನ್ನು ಆಯಾ ಕಾಲೇಜು ಹಂತದಲ್ಲೇ ಮಾಡಲು ಅವಕಾಶ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈಗ ಕಾಲೇಜು ಮಟ್ಟದಲ್ಲಿಯೇ ಮೌಲ್ಯಮಾಪನಕ್ಕೆ ಅನುಮತಿ ನೀಡುವ ಸಾಧ್ಯತೆಯೂ ಇದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು...

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement