ವಿದ್ಯಾರ್ಥಿಗಳೇ ಗಮನಿಸಿ..ಪ್ರಥಮ-ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. 2021-22 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಂಬಂಧ ಸೃಷ್ಟಿಯಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ದಿನಾಂಕವನ್ನು ಘೋಷಿಸಿದೆ.
ಈ ಮೊದಲು ಪರೀಕ್ಷೆಯನ್ನು ನವೆಂಬರ್ 29 ರಿಂದ ನಡೆಸಲು ನಿರ್ಧರಿಸಲಾಗಿತ್ತು. ಈಗ ಡಿಸೆಂಬರ್ 9ರಿಂದ 23 ರವರೆಗೆ ಪರೀಕ್ಷೆ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆಗಳನ್ನ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಒದಗಿಸಲಾಗುವುದು ಹಾಗೂ ಪ್ರಶ್ನೆ ಪತ್ರಿಕೆಗಳನ್ನು ಅಗತ್ಯಕ್ಕೆ ಅನುಗುಣವಾಗಿ ಮುದ್ರಿಸಿ, ನೋಡಲ್ ಕೇಂದ್ರಗಳ ಮೂಲಕ ಆಯಾ ವಿಷಯದ ಪರೀಕ್ಷಾ ಕೇಂದ್ರಗಳಿಗೆ ರವಾನೆ ಮಾಡಲಾಗುವುದು ಎಂದು ತಿಳಿಸಿದೆ.
ಪ್ರಶ್ನೆ ಪತ್ರಿಕೆ ವಿತರಣೆ ಮಾಡುವುದು ಆಯಾ ಕಾಲೇಜುಗಳ ಪ್ರಾಂಶುಪಾಲರದ್ದೇ ಆಗಿರತ್ತೆ. ಪ್ರಥಮ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಆಯಾ ಕಾಲೇಜು ಹಂತದಲ್ಲಿಯೇ ನಡೆಯಲಿದೆ. ಪ್ರಾಂಶುಪಾಲರು ತಮ್ಮ ಉಸ್ತುವಾರಿಯಲ್ಲಿ ಸಂಬಂಧಪಟ್ಟ ವಿಷಯಗಳ ಉಪನ್ಯಾಸಕರಿಂದ ಪ್ರಶ್ನೆ ಪತ್ರಿಕೆಗಳನ್ನ ಸಿದ್ಧಪಡಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಪರೀಕ್ಷೆ ನಡೆಸಿ, ಮೌಲ್ಯಮಾಪನ ಮಾಡಿಸುವುದು, ಅಂಕಗಳನ್ನ ತಿಳಿಸಿ, ಪರೀಕ್ಷೆ ಮುಗಿದ ಮೇಲೆ ಕಾರ್ಯನಿರತ 15 ದಿನಗಳೊಳಗೆ ಎಸ್‌ಎಟಿಎಸ್‌ ಪೋರ್ಟಲ್‌(SATS portal)ನಲ್ಲಿ ರಜಿಸ್ಟರ್ ಮಾಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ
ಪಾಲಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಮಧ್ಯವಾರ್ಷಿಕ ಪರೀಕ್ಷೆ ಪಬ್ಲಿಕ್‌ ಪರೀಕ್ಷೆಯಾಗಿ ನಡೆಸುವುದನ್ನು ವಿರೋಧಿಸಿದ್ದರು. ಅಲ್ಲದೆ, ಹಲವರು ಕಾಲೇಜು ಹಂತದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಚಿವರು, ಉಪನ್ಯಾಸಕರು, ಪೋಷಕರ ಜತೆ ಸಭೆ ನಡೆದಿತ್ತು. ಪ್ರಸ್ತುತ ಪರೀಕ್ಷೆ ಹೊಸ ವೇಳಾಪಟ್ಟಿ ಶೀಘ್ರ ಬಿಡುಗಡೆ ಆಗಲಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement