ಸತತ 5ನೇ ಬಾರಿಗೆ ಭಾರತದ ಸ್ವಚ್ಛ ನಗರ ಪಟ್ಟ ಅಲಂಕರಿಸಿದ ಇಂದೋರ್..!

ನವದೆಹಲಿ: ಕೇಂದ್ರ ಸರ್ಕಾರ ದೇಶದ ಸ್ವಚ್ಚ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಸತತ 5ನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪ್ರಶಸ್ತಿ ಪಡೆದಿದೆ.
ಆದರೆ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರಿಗೆ ನಿರಾಸೆಯಾಗಿದೆ. ಮೈಸೂರು ನಗರ 5 ನೇ ಸ್ಥಾನ ಪಡೆದುಕೊಂಡಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಶನಿವಾರ ಪ್ರಶಸ್ತಿ ವಿಜೇತ ನಗರಗಳ ಹೆಸರನ್ನು ಪ್ರಕಟಿಸಿದ್ದಾರೆ. ಸೂರತ್ ಮತ್ತು ವಿಜಯವಾಡ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಕನಸನ್ನು ಹೊತ್ತಿದ್ದ ಮೈಸೂರಿಗೆ ನಿರಾಸೆಯಾಗಿದೆ. ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛ ರಾಜ್ಯಗಳ ಸರ್ವೆಯಲ್ಲಿ ಛತ್ತೀಸ್‌ಘಡ ಮೊದಲ ಸ್ಥಾನ ಪಡೆದಿದೆ. ಹಾಗೆಯೇ ಗಂಗಾ ನದಿ ಪಾತ್ರದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

5 / 5. 1

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

ನಿಮ್ಮ ಕಾಮೆಂಟ್ ಬರೆಯಿರಿ

advertisement